ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿದ ಆಟೋ ರಿಕ್ಷಾವೊಂದು ರಸ್ತೆ ಬದಿಯ ಚರಂಡಿಗೆ ಬಿದ್ದು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಕ್ಕಳಿಗೆ ಗಾಯವಾಗಿರುವ ಘಟನೆ ಅಮ್ಮುಂಜೆಯಲ್ಲಿ ಶುಕ್ರವಾರ ಮಧ್ಯ ರಾತ್ರಿ ವೇಳೆ ನಡೆದಿದೆ.
ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಗಾಣೆಮಾರ್ ಎಂಬಲ್ಲಿ ಅಪಘಾತ ನಡೆದಿದ್ದು, ರಿಕ್ಷಾ ಚಾಲಕ ಅಮ್ಮುಂಜೆ ನಿವಾಸಿ ಮಹಾಬಲ ಪೂಜಾರಿ ( 37) ಮೃತಪಟ್ಟ ಅವಿವಾಹಿತ ಯುವಕ. ಈತನ ಸಂಬಂಧಿಗಳಾದ ತುಷಾರ್,ಭವಿತ್ ಮತ್ತು ಪ್ರದೀಪ್ ಎಂಬವರು ಗಾಯಗೊಂಡ ಮಕ್ಕಳು.
ಮೂಡಬಿದಿರೆಯ ಮಿಜಾರು ಎಂಬಲ್ಲಿಗೆ ಜಾತ್ರೆಗೆ ಹೋಗಿ ಮರಳುವ ವೇಳೆ ಮನೆಗೆ ಸುಮಾರು 500 ಮೀ ದೂರದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಚಾಲಕನ ನಿಯಂತ್ರಣ ಕಳೆದುಕೊಂಡ ರಿಕ್ಷಾ ತಲೆಕೆಳಗಾದ ಸ್ಥಿತಿಯಲ್ಲಿ ಚರಂಡಿಗೆ ಬಿದ್ದಿದೆ. ಮೂವರು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಬಂಟ್ವಾಳ ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…