ಬಂಟ್ವಾಳ: ಚಿಕನ್ ಟಿಕ್ಕಾ ಪಾರ್ಸೆಲ್ ಕೊಳ್ಳಲು ಬಂದ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಕಲ್ಲಡ್ಕದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಕಲ್ಲಡ್ಕ-ವಿಟ್ಲ ರಸ್ತೆಯಲ್ಲಿರುವ ಟಿಕ್ಕಾ ಪಾಯಿಂಟ್ ಗೆ ಅಪ್ರಾಪ್ತ ಬಾಲಕ 8 ಗಂಟೆ ಸುಮಾರಿಗೆ ಟಿಕ್ಕಾ ಪಾರ್ಸೆಲ್ ಕೊಳ್ಳಲು ಬಂದಿದ್ದಾನೆ. ಆ ವೇಳೆ ಬಾಲಕನಲ್ಲಿ ಅಂಗಡಿ ಒಳಗಿಂದ ಪಾರ್ಸೆಲ್ ಗೆ ಪ್ಲ್ಯಾಸ್ಟಿಕ್ ಕವರ್ ತೆಗೆದುಕೊಳ್ಳುವಂತೆ ಅಂಗಡಿ ಮಾಲೀಕ ಮಹಮ್ಮದ್ ಅಶ್ರಫ್ ಕರೆದಿದ್ದಾನೆ. ಬಾಲಕ ಒಳಗೆ ಬರುತ್ತಿದ್ದಂತೆ ಆರೋಪಿ ಅಂಗಡಿ ಮಾಲೀಕ ಅಶ್ರಫ್ ಬಾಲಕನ ಹಿಂಬದಿಯಿಂದ ಹೋಗಿ ಆತನನ್ನು ಹಿಡಿದು ಎತ್ತಿಕೊಂಡು ಅಲ್ಲೇ ಸಮೀಪದ ತೋಟಕ್ಕೆ ಕರೆದುಕೊಂಡು ಹೋಗಿ ಅಲ್ಲಿ ದೌರ್ಜನ್ಯ ಎಸಗಿದ್ದಾನೆಂದು ಆರೋಪಿಸಲಾಗಿದೆ.
ಕಾರ್ಕಳ: ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ; ಸವಾರ ಮೃತ್ಯು – Vishwanews24
ಈ ಘಟನೆಯ ಕೆಲವು ದಿನಗಳ ಬಳಿಕ ಬಾಲಕ ಕಲ್ಲಡ್ಕ ಪೇಟೆಗೆ ಹಾಲು ತರಲೆಂದು ಅಂಗಡಿಗೆ ಹೋಗಿ ವಾಪಾಸ್ಸಾಗುವಾಗ ಎದುರಿನಿಂದ ಬಂದ ಆರೋಪಿ ಈತನನ್ನು ಬರುವಂತೆ ಒತ್ತಾಯಿಸಿದ್ದಾನೆ. ನಾನು ಬರುವುದಿಲ್ಲ ಎಂದು ವಿರೋಧ ವ್ಯಕ್ತಪಡಿಸಿದ ಬಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ.ಬಾಲಕ ತಪ್ಪಿಸಿಕೊಂಡು ಮನೆಗೆ ಹೋಗಿ ಪೋಷಕರಿಗೆ ವಿಚಾರ ತಿಳಿಸಿದ್ದಾನೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…