Featured

ಬಂಟ್ವಾಳ: ಜನಾರ್ದನ ಪೂಜಾರಿ ಆಶಿರ್ವಾದ ಪಡೆದ ಶಾಸಕ ಖಾದರ್ – Vishwanews24

ಬಂಟ್ವಾಳ: ಜನಾರ್ದನ ಪೂಜಾರಿ ಆಶಿರ್ವಾದ ಪಡೆದ ಶಾಸಕ ಖಾದರ್

ಬಂಟ್ವಾಳ: ಉಳ್ಳಾಲ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಮಾಜಿ ಸಚಿವ, ವಿಪಕ್ಷ ನಾಯಕ ಯು.ಟಿ.ಖಾದರ್ ಅವರು ಕೇಂದ್ರದ ಮಾಜಿ ಸಚಿವ ಹಿರಿಯ ಕಾಂಗ್ರೆಸ್ ನಾಯಕ್ ಬಿಲ್ಲವ ಮುಖಂಡ ಬಿ.ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ಇಂದು ಬೇಟಿ ನೀಡಿ ಪೂಜಾರಿ ಅವರ ಕಾಲಿಗೆ ನಮಸ್ಕರಿಸಿ ಮುಂದಿನ ಚುನಾವಣೆಯ ಗೆಲುವಿಗಾಗಿ ಆಶಿರ್ವಾದ ಪಡೆದರು.

ಕಾಂಗ್ರೇಸ್ ಕಾರ್ಯಕರ್ತರು ಕುಟುಂಬದ ಸದಸ್ಯರು ಅವರಿಗೆ ಕಿಂಚಿತ್ತೂ ನೋವಾಗದ ರೀತಿಯಲ್ಲಿ ಜೊತೆಯಲ್ಲಿ ಕರೆದುಕೊಂಡು ಹೋಗಿ ಅವರ ನೋವು ನಲಿವುಗಳಿಗೆ ಸದಾ ಜೊತೆ ನಿಂತು ಪ್ರೋತ್ಸಾಹ ನೀಡಿ ಎಂದು ಶಾಸಕರಿಗೆ ಪೂಜಾರಿ ಅವರು ಕಿವಿಮಾತು ಹೇಳಿದರು.

ಮುಂದಿನ ಚುನಾವಣೆಯಲ್ಲಿ ಪ್ರಚಂಡ ಬಹುಮತದ ಮೂಲಕ ಗೆಲುವು ಸಾಧಿಸಿ ಎಂದು ಹರಸಿದರು.

‌‌ಶಾಸಕ ಯು.ಟಿ.ಖಾದರ್ ಮಾತನಾಡಿ, ಚುನಾವಣೆಯ ಸ್ಪರ್ಧೆಯ ಮುನ್ನ ಹಿರಿಯ ಕಾಂಗ್ರೆಸ್ ನಾಯಕ ಕರಾವಳಿ ಭಾಗದ ಅಭಿವೃದ್ಧಿಗೆ ಕೊಡುಗೆ ನೀಡಿದ ಪೂಜಾರಿ ಅವರ ಮಾರ್ಗದರ್ಶನ ಸಲಹೆ ಸೂಚನೆ ಹಾಗೂ ಆಶ್ರೀರ್ವಾದ ಪಡೆಯಲು ಮನೆಗೆ ಬಂದಿದ್ದೇನೆ.

ನಾನು ವಿದ್ಯಾರ್ಥಿ ದೆಸೆಯಿಂದ ರಾಜಕೀಯವಾಗಿ ಬೆಳೆದು ಇಷ್ಟು ಎತ್ತರಕ್ಕೆ ಬೆಳೆಯಲು ಪೂಜಾರಿ ಅವರೇ ಕಾರಣ.ಕಳೆದ ಐದು ವರ್ಷಗಳಲ್ಲಿ ಕ್ಷೇತ್ರದ ಜನರ ಗೌರವಕ್ಕೆ ಚ್ಯುತಿ ಬರದ ರೀತಿಯ ಲ್ಲಿ ಕೆಲಸ ಮಾಡಿದ್ದೇನೆ,ಮುಂದೆಯೂ ಜನ ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸ ಇದ್ದು, ಕ್ಷೇತ್ರದ ಜನರ ಜೊತೆ ಜಿಲ್ಲೆಯ ಜನರ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತೇನೆ. ಸರ್ವ ಜನರ ಸರ್ವ ಧರ್ಮವನ್ನು ಪ್ರೀತಿ ಮಾಡಿಕೊಂಡು ಅಭಿವೃದ್ಧಿ ಕಾರ್ಯಮಾಡುತ್ತೇನೆ ಎಂದು ಅವರು ತಿಳಿಸಿದರು.

ಮುಡಿಪು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಪ್ರಶಾಂತ್ ಕಾಜವ , ಪ್ರಮುಖರಾದ ಚಂದ್ರಹಾಸ ಕರ್ಕೇರ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ,ಉಮ್ಮರ್ ಫಾರೂಕ್ ಪರಂಗಿಪೇಟೆ, ಪ್ರವೀಣ್ ಅಳ್ಚ, ದೇವದಾಸ ಭಂಡಾರಿ, ದೀಪಕ್ ಪಿಲಾರ್, ಮಹಮ್ಮದ್ ಮೋನು, ಕೃಷ್ಣ ಗಟ್ಟಿ,ಚಂದ್ರಿಕಾ, ರಮ್ಲಾನ್ ಮಾರಿಪಳ್ಳ,ಈಶ್ವರ್ ಉಳ್ಳಾಲ್, ಅಬ್ದುಲ್ ಜಲೀಲ್ , ನಾಸೀರ್ ನಡುಪದವು, ದೇವಣ್ಣ ಶೆಟ್ಟಿ, ದೇವದಾಸ್ ಭಂಡಾರಿ, ಸುರೇಶ್ ಭಟ್ ನಗರ, ಇಕ್ಬಾಲ್ ಸುಜೀರು, ಬಾಬು ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

3 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

3 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago