Featured

ಬಂಟ್ವಾಳ:  ಜಾನುವಾರುಗಳ ಚರ್ಮಗಂಟು ರೋಗ – ಮೊದಲ ಬಾರಿಗೆ ಶಂಕಿತ ಪ್ರಕರಣ ಪತ್ತೆ ; 1 ದನ ಸಾವು – Vishwanews24

ಬಂಟ್ವಾಳ:  ಜಾನುವಾರುಗಳ ಚರ್ಮಗಂಟು ರೋಗ  – ಮೊದಲ ಬಾರಿಗೆ ಶಂಕಿತ ಪ್ರಕರಣ ಪತ್ತೆ ; 1 ದನ ಸಾವು

ಬಂಟ್ವಾಳ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡು ಆತಂಕ ಮೂಡಿಸಿರುವ ಜಾನುವಾರುಗಳ ಚರ್ಮಗಂಟು ರೋಗ ಇದೇ ಮೊದಲ ಬಾರಿಗೆ ದ.ಕ.ಜಿಲ್ಲೆಯಲ್ಲಿ ಕಾಣಿಸಿಕೊಂಡಿದ್ದು, ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ಒಂದೇ ಮನೆಯ ಮೂರು ದನಗಳಲ್ಲಿ ಶಂಕಿತ ಪ್ರಕರಣ ಪತ್ತೆಯಾಗಿದೆ.

ಅದರಲ್ಲಿ ಒಂದು ದನ ಈಗಾಗಲೇ ಮೃತಪಟ್ಟಿದ್ದು, ಎರಡು ದನಗಳು ಚಿಕಿತ್ಸೆಯ ಬಳಿಕ ಬಹುತೇಕ ಗುಣಮುಖವಾಗಿವೆ.

ದ.ಕ.ಜಿಲ್ಲಾ ಪಶು ಪಾಲನ ಇಲಾಖೆಯ ಮಾಹಿತಿ ಪ್ರಕಾರ ಬಿಳಿಯೂರಿನ ಮಲ್ಲಡ್ಕದಲ್ಲಿ ಕಾಣಿಸಿಕೊಂಡ ಶಂಕಿತ ಪ್ರಕರಣಕ್ಕೆ ಅ. 8ರಿಂದ ಕೆಎಂಎಫ್‌ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಒಂದು ದನ ಅ. 11ರಂದು ಮೃತಪಟ್ಟಿದೆ. ಆದರೆ ಉಳಿದ 2 ದನಗಳು ಬಹುತೇಕ ಗುಣಮುಖವಾಗಿವೆ. ದನ ಚರ್ಮಗಂಟು ರೋಗ ದಿಂದ ಸತ್ತಿಲ್ಲ, ಅದಕ್ಕೆ ಬೇರೆ ಕಾಯಿಲೆಯೂ ಇತ್ತು ಎನ್ನಲಾಗಿದೆ.

ಪಿಎಂ ಕಿಸಾನ್‌ ಸಮ್ಮಾನ್‌ – ಉಡುಪಿಯ 1.5 ಲಕ್ಷ ರೈತರಿಗೆ ಅನುದಾನ: ಶೋಭಾ ಕರಂದ್ಲಾಜೆ – Vishwanews24

ಈ ಖಾಯಿಲೆಯ ಮುಂಜಾಗ್ರತ ಕ್ರಮವಾಗಿ ಪ್ರಕರಣ ಕಂಡುಬಂದ ಮನೆಯ ಸುತ್ತಲೂ ಸೇರಿದಂತೆ ಗ್ರಾಮದ ಬಹುತೇಕ ಜಾನುವಾರುಗಳಿಗೆ ಎಲ್‌ಎಸ್‌ಡಿ ಲಸಿಕೆ ನೀಡಲಾಗಿದ್ದು, ಜತೆಗೆ ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಗಿಂಗ್‌ ಕಾರ್ಯವನ್ನೂ ಮಾಡಲಾಗಿದೆ. ಜತೆಗೆ ಪ್ರದೇಶದ ಮನೆಗಳಿಗೆ ಮುಂಜಾಗ್ರತ ಕ್ರಮಗಳನ್ನೂ ತಿಳಿಸಲಾಗಿದೆ.

ಬಿಳಿಯೂರು ಪ್ರದೇಶದಲ್ಲಿ ಸುಮಾರು 600 ದನಗಳಿಗೆ ಲಸಿಕೆಗಳನ್ನು ನೀಡಲಾಗಿದ್ದು, ಉಳಿದಂತೆ ಜಿಲ್ಲೆಗೆ ಪೂರೈಕೆಯಾಗಿ ರುವ 2000 ಲಸಿಕೆಗಳಲ್ಲಿಗೋಶಾಲೆಗಳ ದನಗಳಿಗೆ ನೀಡುವ ಕಾರ್ಯಮಾಡಲಾಗಿದೆ. ಸತ್ತಿರುವ ದನದ ಕುರಿತು ಇಲಾಖೆಯು ಸರಕಾರಕ್ಕೆ ವರದಿ ನೀಡಿದ್ದು, 20 ಸಾವಿರ ರೂ. ಪರಿಹಾರ ಸಿಗುವ ಸಾಧ್ಯತೆ ಇದೆ.

ಮಂಗಳೂರು: ಮುಂದಿನ 15 ದಿನಗಳಲ್ಲಿ ಸುರತ್ಕಲ್ ಟೋಲ್ ಸಮಸ್ಯೆ ಪರಿಹಾರ : ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿ ಎಂ.ಕೆ. ವತಾರೆ ಭರವಸೆ – Vishwanews24

ಬಿಳಿಯೂರಿನಲ್ಲಿ ಜಿಲ್ಲೆಯ ಮೊದಲ ಶಂಕಿತ ಪ್ರಕರಣ ಕಂಡುಬಂದಿದ್ದು, ಈಗಾಗಲೇ ಸುತ್ತಮುತ್ತಲ ಪ್ರದೇಶದಲ್ಲಿ ಲಸಿಕೆ ಹಾಗೂ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್‌ ಕಾರ್ಯವನ್ನು ನಡೆಸಿದ್ದೇವೆ. ಜಿಲ್ಲೆಗೆ ಬಂದಿರುವ 2 ಸಾವಿರ ಲಸಿಕೆಗಳನ್ನು ಈಗಾಗಲೇ ನೀಡಲಾಗಿದ್ದು, ಹೆಚ್ಚಿನ ಲಸಿಕೆಗಳಿಗೆ ಬೇಡಿಕೆ ಸಲ್ಲಿಸಲಾಗಿದೆ. ಜತೆಗೆ ಸತ್ತಿರುವ ದನಕ್ಕೆ ಸರಕಾರದಿಂದ ಸಿಗುವ ಪರಿಹಾರಕ್ಕೂ ವ್ಯವಸ್ಥೆ ಮಾಡಲಾಗುತ್ತಿದೆ.– ಅರುಣ್‌ಕುಮಾರ್‌ ಶೆಟ್ಟಿ ಉಪನಿರ್ದೇಶಕರು, ಪಶು ಪಾಲನಾ ಇಲಾಖೆ. ದ.ಕ.ಜಿಲ್ಲೆ

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

11 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

11 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

11 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

11 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago