Featured

ಬಂಟ್ವಾಳ:  ಜಾನುವಾರುಗಳ ಚರ್ಮಗಂಟು ರೋಗ – ಮೊದಲ ಬಾರಿಗೆ ಶಂಕಿತ ಪ್ರಕರಣ ಪತ್ತೆ ; 1 ದನ ಸಾವು – Vishwanews24

ಬಂಟ್ವಾಳ:  ಜಾನುವಾರುಗಳ ಚರ್ಮಗಂಟು ರೋಗ  – ಮೊದಲ ಬಾರಿಗೆ ಶಂಕಿತ ಪ್ರಕರಣ ಪತ್ತೆ ; 1 ದನ ಸಾವು

ಬಂಟ್ವಾಳ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡು ಆತಂಕ ಮೂಡಿಸಿರುವ ಜಾನುವಾರುಗಳ ಚರ್ಮಗಂಟು ರೋಗ ಇದೇ ಮೊದಲ ಬಾರಿಗೆ ದ.ಕ.ಜಿಲ್ಲೆಯಲ್ಲಿ ಕಾಣಿಸಿಕೊಂಡಿದ್ದು, ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ಒಂದೇ ಮನೆಯ ಮೂರು ದನಗಳಲ್ಲಿ ಶಂಕಿತ ಪ್ರಕರಣ ಪತ್ತೆಯಾಗಿದೆ.

ಅದರಲ್ಲಿ ಒಂದು ದನ ಈಗಾಗಲೇ ಮೃತಪಟ್ಟಿದ್ದು, ಎರಡು ದನಗಳು ಚಿಕಿತ್ಸೆಯ ಬಳಿಕ ಬಹುತೇಕ ಗುಣಮುಖವಾಗಿವೆ.

ದ.ಕ.ಜಿಲ್ಲಾ ಪಶು ಪಾಲನ ಇಲಾಖೆಯ ಮಾಹಿತಿ ಪ್ರಕಾರ ಬಿಳಿಯೂರಿನ ಮಲ್ಲಡ್ಕದಲ್ಲಿ ಕಾಣಿಸಿಕೊಂಡ ಶಂಕಿತ ಪ್ರಕರಣಕ್ಕೆ ಅ. 8ರಿಂದ ಕೆಎಂಎಫ್‌ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಒಂದು ದನ ಅ. 11ರಂದು ಮೃತಪಟ್ಟಿದೆ. ಆದರೆ ಉಳಿದ 2 ದನಗಳು ಬಹುತೇಕ ಗುಣಮುಖವಾಗಿವೆ. ದನ ಚರ್ಮಗಂಟು ರೋಗ ದಿಂದ ಸತ್ತಿಲ್ಲ, ಅದಕ್ಕೆ ಬೇರೆ ಕಾಯಿಲೆಯೂ ಇತ್ತು ಎನ್ನಲಾಗಿದೆ.

ಪಿಎಂ ಕಿಸಾನ್‌ ಸಮ್ಮಾನ್‌ – ಉಡುಪಿಯ 1.5 ಲಕ್ಷ ರೈತರಿಗೆ ಅನುದಾನ: ಶೋಭಾ ಕರಂದ್ಲಾಜೆ – Vishwanews24

ಈ ಖಾಯಿಲೆಯ ಮುಂಜಾಗ್ರತ ಕ್ರಮವಾಗಿ ಪ್ರಕರಣ ಕಂಡುಬಂದ ಮನೆಯ ಸುತ್ತಲೂ ಸೇರಿದಂತೆ ಗ್ರಾಮದ ಬಹುತೇಕ ಜಾನುವಾರುಗಳಿಗೆ ಎಲ್‌ಎಸ್‌ಡಿ ಲಸಿಕೆ ನೀಡಲಾಗಿದ್ದು, ಜತೆಗೆ ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಗಿಂಗ್‌ ಕಾರ್ಯವನ್ನೂ ಮಾಡಲಾಗಿದೆ. ಜತೆಗೆ ಪ್ರದೇಶದ ಮನೆಗಳಿಗೆ ಮುಂಜಾಗ್ರತ ಕ್ರಮಗಳನ್ನೂ ತಿಳಿಸಲಾಗಿದೆ.

ಬಿಳಿಯೂರು ಪ್ರದೇಶದಲ್ಲಿ ಸುಮಾರು 600 ದನಗಳಿಗೆ ಲಸಿಕೆಗಳನ್ನು ನೀಡಲಾಗಿದ್ದು, ಉಳಿದಂತೆ ಜಿಲ್ಲೆಗೆ ಪೂರೈಕೆಯಾಗಿ ರುವ 2000 ಲಸಿಕೆಗಳಲ್ಲಿಗೋಶಾಲೆಗಳ ದನಗಳಿಗೆ ನೀಡುವ ಕಾರ್ಯಮಾಡಲಾಗಿದೆ. ಸತ್ತಿರುವ ದನದ ಕುರಿತು ಇಲಾಖೆಯು ಸರಕಾರಕ್ಕೆ ವರದಿ ನೀಡಿದ್ದು, 20 ಸಾವಿರ ರೂ. ಪರಿಹಾರ ಸಿಗುವ ಸಾಧ್ಯತೆ ಇದೆ.

ಮಂಗಳೂರು: ಮುಂದಿನ 15 ದಿನಗಳಲ್ಲಿ ಸುರತ್ಕಲ್ ಟೋಲ್ ಸಮಸ್ಯೆ ಪರಿಹಾರ : ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿ ಎಂ.ಕೆ. ವತಾರೆ ಭರವಸೆ – Vishwanews24

ಬಿಳಿಯೂರಿನಲ್ಲಿ ಜಿಲ್ಲೆಯ ಮೊದಲ ಶಂಕಿತ ಪ್ರಕರಣ ಕಂಡುಬಂದಿದ್ದು, ಈಗಾಗಲೇ ಸುತ್ತಮುತ್ತಲ ಪ್ರದೇಶದಲ್ಲಿ ಲಸಿಕೆ ಹಾಗೂ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್‌ ಕಾರ್ಯವನ್ನು ನಡೆಸಿದ್ದೇವೆ. ಜಿಲ್ಲೆಗೆ ಬಂದಿರುವ 2 ಸಾವಿರ ಲಸಿಕೆಗಳನ್ನು ಈಗಾಗಲೇ ನೀಡಲಾಗಿದ್ದು, ಹೆಚ್ಚಿನ ಲಸಿಕೆಗಳಿಗೆ ಬೇಡಿಕೆ ಸಲ್ಲಿಸಲಾಗಿದೆ. ಜತೆಗೆ ಸತ್ತಿರುವ ದನಕ್ಕೆ ಸರಕಾರದಿಂದ ಸಿಗುವ ಪರಿಹಾರಕ್ಕೂ ವ್ಯವಸ್ಥೆ ಮಾಡಲಾಗುತ್ತಿದೆ.– ಅರುಣ್‌ಕುಮಾರ್‌ ಶೆಟ್ಟಿ ಉಪನಿರ್ದೇಶಕರು, ಪಶು ಪಾಲನಾ ಇಲಾಖೆ. ದ.ಕ.ಜಿಲ್ಲೆ

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago