ಬಂಟ್ವಾಳ: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾಗಿ ವ್ಯಕ್ತಿಯೊಬ್ಬರು ಸಾವನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮಂಗಳೂರು ಬೆಂಗಳೂರು ರಸ್ತೆಯ ಬಿಸಿರೋಡಿನಲ್ಲಿ ನಡೆದಿದೆ.
ಮೃತರನ್ನು ನಂದರಬೆಟ್ಟು ನಿವಾಸಿ 77 ವರ್ಷದ ಸದಾಶಿವ ಆಚಾರ್ಯ ಎಂದು ಗುರುತಿಸಲಾಗಿದೆ. ಸದಾಶಿವ ಅವರ ಮೊಮ್ಮಗ ಚಾಲಕ ಅಕಾಶ್, ಅಳಿಯ ಸುರೇಶ್ ಆಚಾರ್ಯ, ಮಗ ಗಣೇಶ್ ಆಚಾರ್ಯ ಅವರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಪುತ್ತೂರಿನಿಂದ ದೇವರ ಕಾರ್ಯದಲ್ಲಿ ಭಾಗಿಯಾಗಿ ವಾಪಾಸು ಮನೆಗೆ ಬರುವ ವೇಳೆ ಬಿಸಿರೋಡಿನ ಅಜ್ಜಿಬೆಟ್ಟು ಕ್ರಾಸ್ ಸಮೀಪದಲ್ಲಿ ಈ ಅವಘಡ ಸಂಭವಿಸಿದೆ.
ಚಾಲಕನ ಅಜಾಗರೂಕತೆಯಿಂದ ಡಿವೈಡರ್ ಗೆ ಗುದ್ದಿದ ಕಾರು ಅ ಬಳಿಕ ಪಲ್ಟಿಯಾಗಿದೆ. ಕಾರಿನಲ್ಲಿ ಚಾಲಕ ಸೇರಿ ನಾಲ್ಕು ಜನ ಒಂದೇ ಮನೆಯವರು ಪ್ರಯಾಣಿಸುತ್ತಿದ್ದರು. ಪುತ್ತೂರು ಸಂಬಂಧಿಕರ ಮನೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಮನೆಗೆ ಇನ್ನೇನು ಕೇವಲ 5 ನಿಮಿಷಗಳ ಕಾಲದಲ್ಲಿ ಮುಟ್ಟುವ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ತಲೆಗೆ ಗಾಯವಾಗಿದ್ದ ಸದಾಶಿವ ಅವರನ್ನು ಕೈಕಂಬ ಪರ್ಲಿಯಾ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಮೃತಪಟ್ಟ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…