ಬಂಟ್ವಾಳ: ತಾಲೂಕಿನ ವಿಟ್ಲ ಸಮೀಪದ ಮಿತ್ತೂರಿನ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತನ್ನ ಜಮೀನಿನಲ್ಲಿ ಬೆಳೆದ ಅಡಕೆ ಮಾರಾಟದಿಂದ ಬಂದ ಆದಾಯದಿಂದ ಶಾಲಾ ಬಸ್ ಖರೀದಿಸಿದೆ.
112 ವರ್ಷಗಳ ಇತಿಹಾಸ ಹೊಂದಿರುವ ಈ ಶಾಲೆಗೆ ನಾಲ್ಕು ಎಕರೆ ಜಮೀನಿದೆ. 2017ರಲ್ಲಿ ಎಸ್ ಡಿಎಂಸಿ, ಶಿಕ್ಷಕರು ಹಾಗೂ ಗ್ರಾಮಸ್ಥರು ಸೇರಿ 628 ಅಡಿಕೆ ಸಸಿಗಳನ್ನು ನೆಟ್ಟಿದ್ದರು. ಈಗ ಇಳುವರಿ ಪಡೆಯುತ್ತಿದ್ದಾರೆ. ಶಾಲೆಯ ಹೊಲವನ್ನು ಹೊರಗುತ್ತಿಗೆ ನೀಡಲಾಗಿದೆ. ಶಾಲೆಗೆ ವಾರ್ಷಿಕ 2.50 ಲಕ್ಷ ಆದಾಯ ಬರುತ್ತದೆ.
ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರಲು ಶಾಲೆಗೆ 26 ಆಸನಗಳ ಬಸ್ ಖರೀದಿಸಲಾಗಿದೆ. ಬಸ್ನ ನಿರ್ವಹಣೆಯನ್ನು ಅಡಿಕೆ ತೋಟದ ಆದಾಯದಿಂದಲೇ ಎಸ್ಡಿಎಂಸಿ ನಿರ್ವಹಿಸುತ್ತದೆ.
ಶಾಸಕ ಸಂಜೀವ ಮಠಂದೂರು ಇತ್ತೀಚೆಗೆ ಬಸ್ ಸಂಚಾರಕ್ಕೆ ಚಾಲನೆ ನೀಡಿದರು. ಗ್ರಾಮಸ್ಥರು, ಶಾಲಾ ಶಿಕ್ಷಕರು ಹಾಗೂ ಎಸ್ಡಿಎಂಸಿಯವರ ಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಶಿರ್ವ: ಮೆಸ್ಕಾಂ ವಾಹನದಿಂದ ಕಾರಿನ ಮೇಲೆ ಬಿದ್ದ ವಿದ್ಯುತ್ ಕಂಬ – Vishwanews24
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…