ಬಂಟ್ವಾಳ: ತಾಯಿಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಘಟನೆ ತಾಲೂಕಿನ ಬರಿಮಾರು ಗ್ರಾಮದ ಗಾಣದಪಾಲು ಎಂಬಲ್ಲಿಂದ ವರದಿಯಾಗಿದೆ.
ಗಾಣದಪಾಲು ನಿವಾಸಿ ಪದ್ಮನಾಭ ಪೂಜಾರಿ ಅವರ ಧರ್ಮ ಪತ್ನಿ ದೀಕ್ಷಿತಾ ಅವರು ಮೂರು ಮಕ್ಕಳಿಗೆ ಅ.19 ರಂದು ಮಧ್ಯಾಹ್ನ 12.45 ರ ವೇಳೆ ಜನ್ಮ ನೀಡಿದ್ದಾರೆ. ಪ್ರಸ್ತುತ ತಾಯಿ ಮತ್ತು ಮೂರು ಮಕ್ಕಳು ಆರೋಗ್ಯದಿಂದ್ದಾರೆ. ಮೊದಲು ಗಂಡು ಮಗುವಿಗೆ ಜನ್ಮ ನೀಡಿದ ಆಕೆ ಬಳಿಕ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾಳೆ.
ಮಂಗಳೂರು ಲೇಡಿಗೋಷನ್ ಆಸ್ಪತ್ರೆಯಲ್ಲಿ ಡಾ. ವಿನೀತ ಶೆಟ್ಟಿ ಅವರ ತಂಡ ಸಿಸೇರಿಯನ್ ಮೂಲಕ ಮಕ್ಕಳನ್ನು ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ಮೂವರು ಮಕ್ಕಳ ತೂಕ ಕಡಿಮೆ ಇರುವುದರಿಂದ ಮಕ್ಕಳನ್ನು ಐಸಿಯು ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇನ್ಸ್ಟಾಗ್ರಾಂ ಪರಿಚಯ : ಯುವಕನ ಹುಡುಕಿಕೊಂಡು ಚೆನ್ನೈ ನಿಂದ ಸುರತ್ಕಲ್ ಗೆ ಬಂದ ಎಂಬಿಬಿಎಸ್ ವಿಧ್ಯಾರ್ಥಿನಿ..
ಕಳೆದ ಸುಮಾರು ಒಂದುವರೆ ತಿಂಗಳಿನಿಂದ ದೀಕ್ಷಿತಾ ಅವರನ್ನು ಮಂಗಳೂರು ಲೇಡಿಗೋಷನ್ ಆಸ್ಪತ್ರೆಯಲ್ಲಿ ದಾಖಲು ಮಾಡಿ ವಿಶೇಷ ಕಾಳಜಿಯಿಂದ ವೈದ್ಯಕೀಯ ಚಿಕಿತ್ಸೆ ನೀಡಿ ನೋಡಿಕೊಂಡ ಸರಕಾರಿ ಆಸ್ಪತ್ರೆಯ ವೈದ್ಯರ ತಂಡಕ್ಕೆ ಮನೆಯವರು ಕೃತಜ್ಞತೆ ಸಲ್ಲಿಸಿದ್ದಾರೆ.
ಬಡತನದಲ್ಲಿ ಜೀವನ ಸಾಗಿಸುವ, ಕೂಲಿ ಕಾರ್ಮಿಕ ಪದ್ಮನಾಭ ಪೂಜಾರಿ ಅವರ ಪತ್ನಿ ದೀಕ್ಷಿತಾ ಮೂರು ಮಕ್ಕಳಿಗೆ ಜನ್ಮ ನೀಡಿದಾಗ ಮನೆಯಲ್ಲಿ ಸಂತಸ ಮೂಡಿದೆ, ಆದರೆ ಇನ್ನೊಂದು ಕಡೆ ಅವರ ಪೋಷಣೆಯ ಜವಾಬ್ದಾರಿ ಇವರ ಮೇಲೆ ಸವಾಲು ಆಗಬಹುದು. ಮಂಗಳೂರು ಜಿಲ್ಲಾ ಆಸ್ಪತ್ರೆಯಲ್ಲಿ ತಿಳಿಸಿದಂತೆ ಹೆರಿಗೆಗಾಗಿ ಒಂದುವರೆ ತಿಂಗಳ ಮೊದಲೇ ದಾಖಲಾಗಿದ್ದರು. ತೂಕ ಕಡಿಮೆ ಇರುವ ಕಾರಣಕ್ಕಾಗಿ ಇದೀಗ ಮೂರು ಮಕ್ಕಳನ್ನು ಐಸಿಯು ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…