Featured

ಬಂಟ್ವಾಳ: ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ – Vishwanews24

ಬಂಟ್ವಾಳ: ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ

ಬಂಟ್ವಾಳ: ತಾಯಿಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಘಟನೆ ತಾಲೂಕಿನ ಬರಿಮಾರು ಗ್ರಾಮದ ಗಾಣದಪಾಲು ಎಂಬಲ್ಲಿಂದ ವರದಿಯಾಗಿದೆ.

ಗಾಣದಪಾಲು ನಿವಾಸಿ ಪದ್ಮನಾಭ ಪೂಜಾರಿ ಅವರ ಧರ್ಮ ಪತ್ನಿ ದೀಕ್ಷಿತಾ ಅವರು ಮೂರು ಮಕ್ಕಳಿಗೆ ಅ.19 ರಂದು ಮಧ್ಯಾಹ್ನ 12.45 ರ ವೇಳೆ ಜನ್ಮ ನೀಡಿದ್ದಾರೆ. ಪ್ರಸ್ತುತ ತಾಯಿ ಮತ್ತು ಮೂರು ಮಕ್ಕಳು ಆರೋಗ್ಯದಿಂದ್ದಾರೆ. ಮೊದಲು ಗಂಡು ಮಗುವಿಗೆ ಜನ್ಮ ನೀಡಿದ ಆಕೆ ಬಳಿಕ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾಳೆ.

ಮಂಗಳೂರು ಲೇಡಿಗೋಷನ್ ಆಸ್ಪತ್ರೆಯಲ್ಲಿ ಡಾ. ವಿನೀತ ಶೆಟ್ಟಿ ಅವರ ತಂಡ ಸಿಸೇರಿಯನ್ ಮೂಲಕ ಮಕ್ಕಳನ್ನು ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ಮೂವರು ಮಕ್ಕಳ ತೂಕ ಕಡಿಮೆ ಇರುವುದರಿಂದ ಮಕ್ಕಳನ್ನು ಐಸಿಯು ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇನ್ಸ್ಟಾಗ್ರಾಂ ಪರಿಚಯ : ಯುವಕನ ಹುಡುಕಿಕೊಂಡು ಚೆನ್ನೈ ನಿಂದ ಸುರತ್ಕಲ್ ಗೆ ಬಂದ ಎಂಬಿಬಿಎಸ್ ವಿಧ್ಯಾರ್ಥಿನಿ..

‌ಕಳೆದ ಸುಮಾರು ಒಂದುವರೆ ತಿಂಗಳಿನಿಂದ ದೀಕ್ಷಿತಾ ಅವರನ್ನು ಮಂಗಳೂರು ಲೇಡಿಗೋಷನ್ ಆಸ್ಪತ್ರೆಯಲ್ಲಿ ದಾಖಲು ಮಾಡಿ ವಿಶೇಷ ಕಾಳಜಿಯಿಂದ ವೈದ್ಯಕೀಯ ಚಿಕಿತ್ಸೆ ನೀಡಿ ನೋಡಿಕೊಂಡ ಸರಕಾರಿ ಆಸ್ಪತ್ರೆಯ ವೈದ್ಯರ ತಂಡಕ್ಕೆ ಮನೆಯವರು ಕೃತಜ್ಞತೆ ಸಲ್ಲಿಸಿದ್ದಾರೆ.

ಬಡತನದಲ್ಲಿ ಜೀವನ ಸಾಗಿಸುವ, ಕೂಲಿ ಕಾರ್ಮಿಕ ಪದ್ಮನಾಭ ಪೂಜಾರಿ ಅವರ ಪತ್ನಿ ದೀಕ್ಷಿತಾ ಮೂರು ಮಕ್ಕಳಿಗೆ ಜನ್ಮ ನೀಡಿದಾಗ ಮನೆಯಲ್ಲಿ ಸಂತಸ ಮೂಡಿದೆ, ಆದರೆ ಇನ್ನೊಂದು ಕಡೆ ಅವರ ಪೋಷಣೆಯ ಜವಾಬ್ದಾರಿ ಇವರ ಮೇಲೆ ಸವಾಲು ಆಗಬಹುದು. ಮಂಗಳೂರು ಜಿಲ್ಲಾ ಆಸ್ಪತ್ರೆಯಲ್ಲಿ ತಿಳಿಸಿದಂತೆ ಹೆರಿಗೆಗಾಗಿ ಒಂದುವರೆ ತಿಂಗಳ ಮೊದಲೇ ದಾಖಲಾಗಿದ್ದರು. ತೂಕ ಕಡಿಮೆ ಇರುವ ಕಾರಣಕ್ಕಾಗಿ ಇದೀಗ ಮೂರು ಮಕ್ಕಳನ್ನು ಐಸಿಯು ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ

ಮಂಗಳೂರು: ಚರ್ಮಗಂಟು ರೋಗ :- ನ. 30 ರವರೆಗೆ ಜಾನುವಾರುಗಳ ಸಾಗಾಟಕ್ಕೆ ತಾತ್ಕಾಲಿಕ ನಿಷೇಧ : ಜಿಲ್ಲಾಧಿಕಾರಿ – Vishwanews24

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

24 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

24 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago