ಬಂಟ್ವಾಳ: ಆಟೋ ಚಾಲಕನೋರ್ವನನ್ನು ದುಷ್ಕರ್ಮಿಗಳು ಹತ್ಯೆ ಮಾಡಲು ಯತ್ನಿಸಿದ ಘಟನೆ ಬಂಟ್ವಾಳದ ವಿಟ್ಲದ ಬೋಳಂತೂರು ಸಮೀಪದ ನಾಡಾಜೆ ಎಂಬಲ್ಲಿ ನಡೆದಿದೆ.
ಬೋಳಂತೂರು ಸಮೀಪದ ಗುಳಿ ನಿವಾಸಿಯಾಗಿರುವ ಅಬೂಬಕ್ಕರ್ ಎಂಬವರ ಪುತ್ರ ಆಟೋ ಚಾಲಕ ಶಾಕೀರ್ (30) ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಯುವಕ.
ನಿನ್ನೆ ರಾತ್ರಿ ಸುಮಾರು 2 ಗಂಟೆಯ ಸುಮಾರಿಗೆ ಕಬಡ್ಡಿ ಮ್ಯಾಚ್ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಶಾಕೀರ್ನನ್ನು ಬೋಳಂತೂರು ಸಮೀಪದ ನಾಡಾಜೆ ರಸ್ತೆಯಲ್ಲಿ ತಡೆದು ನಾಲ್ವರು ದುಷ್ಕರ್ಮಿಗಳಿಂದ ತಲವಾರಿನಿಂದ ದಾಳಿ ನಡೆಸಿದ್ದು, ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ.
ಈತ ಇದೀಗ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾನೆ. ಈತನ ಪರಿಚಯಸ್ಥರೇ ಈ ಹೇಯ ಕೃತ್ಯ ಎಸಗಿರಬೇಕೆಂದು ಸ್ಥಳೀಯರು ಆರೋಪಿಸಿದ್ದಾರೆ.
ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…