ಬಂಟ್ವಾಳ : ದ್ವಿಚಕ್ರ ವಾಹನ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬಿ.ಸಿ.ರೋಡಿನ ಎಲ್ಐಸಿ ಕಚೇರಿ ಮುಂಭಾಗ ನಡೆದಿದೆ.
ಉಪ್ಪಿನಂಗಡಿ ಸಮೀಪದ ನಟ್ಟಿಬೈಲು ಎಂಬಲ್ಲಿನ ನಿವಾಸಿ ಕೆ.ಸದಾರಾಮ ಅವರ ಪತ್ನಿ ಸರಸ್ವತಿ (50) ಮೃತ ಮಹಿಳೆ. ಮೃತರ ಪತಿ ಎಲ್ಐಸಿ ಏಜೆಂಟ್ ಆಗಿದ್ದು, ಕಚೇರಿಯಲ್ಲಿ ಕಾರ್ಯಕ್ರಮ ಇದ್ದ ಕಾರಣ ಸರಸ್ವತಿ ಅವರು ಬಂದಿದ್ದರು. ಎಲ್ಐಸಿ ಕಚೇರಿಯಿಂದ ಮರಳುತ್ತಿರುವಾಗ, ಉಪ್ಪಿನಂಗಡಿಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಸ್ಕೂಟರ್ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ತಲೆಯ ಭಾಗಕ್ಕೆ ಗಾಯಗಳಾಗಿದ್ದ ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ಸಾಗಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.
ಮೃತರು ಪತಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…