Featured

ಬಂಟ್ವಾಳ: ನಾಗರಹಾವಿನ ಹೊಟ್ಟೆಯಲ್ಲಿ ಸುಣ್ಣದ ಡಬ್ಬ – ಗಾಯಗೊಂಡ ಹಾವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ – Vishwanews24

ಬಂಟ್ವಾಳ: ನಾಗರಹಾವಿನ ಹೊಟ್ಟೆಯಲ್ಲಿ ಸುಣ್ಣದ ಡಬ್ಬ – ಗಾಯಗೊಂಡ ಹಾವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಅಲಂಪುರಿ ಸಾಲು ಮರದ ತಿಮ್ಮಕ್ಕ ಉದ್ಯಾನವನದ ಸಮೀಪದ ಮನೆಯೊಂದರ ಬಳಿ ಗಾಯಗೊಂಡು ಪತ್ತೆಯಾಗಿದ್ದ ನಾಗರ ಹಾವೊಂದನ್ನು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಗುಣಮುಖಗೊಳಿಸಿ ಜೂ. ೧೯ರಂದು ಸುರಕ್ಷಿತವಾಗಿ ರಕ್ಷಿತಾರಣ್ಯಕ್ಕೆ ಬಿಡಲಾಗಿದೆ.

ಅಲಂಪುರಿ ನಿವಾಸಿ ವಸಂತಿ ಅವರ ಮನೆ ಬಳಿಯ ಬಿಲವೊಂದರಲ್ಲಿ ಜೂ. ೬ರಂದು ನಾಗರ ಹಾವೊಂದು ಪತ್ತೆಯಾಗಿದ್ದು, ಹೊರಗೆ ಬರಲು ಸಾಧ್ಯವಾಗದೆ ಒದ್ದಾಡುತ್ತಿತ್ತು. ಅವರು ಉರಗ ಪ್ರೇಮಿ ಸ್ನೇಕ್ ಕಿರಣ್ ಗೆ ತಿಳಿಸಿದ್ದರು. ಬಳಿಕ ಅವರು ಹಾವನ್ನು ಬಿಲದಿಂದ ಹೊರಗೆ ತೆಗೆದಿದ್ದು, ಆದರೆ ಅದರ ಹೊಟ್ಟೆ ಹಾಗೂ ಕುತ್ತಿಗೆಗೆ ಗಾಯವಾಗಿತ್ತು.

ಕಿರಣ್ ಅವರು ಅದನ್ನು ಮಂಗಳೂರಿಗೆ ಕೊಂಡು ಹೋಗಿ ಪಶುವೈದ್ಯ ಡಾ.ಯಶಸ್ವಿ ಅವರ ಬಳಿ ತೋರಿಸಿದರು. ಪರೀಕ್ಷಿಸಿದ ವೈದ್ಯರು ಪ್ರಾರಂಭದಲ್ಲಿ ಹರಿದ ಚರ್ಮಕ್ಕೆ ಹೊಲಿಗೆ ಹಾಕಿದ್ದು, ಆದರೂ ಅದರ ಹೊಟ್ಟೆಯಲ್ಲಿ ಏನೋ ಇದೆ ಎಂದು ಸಂಶಯಗೊಂಡು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆಗ ಹೊಟ್ಟೆಯೊಳಗೆ ಸುಣ್ಣ ತುಂಬುವ ಪ್ಲಾಸ್ಟಿಕ್ ಪತ್ತೆಯಾಗಿದ್ದು, ಅದನ್ನು ಯಶಸ್ವಿಯಾಗಿ ಹೊರಗೆ ತೆಗೆಯಲಾಗಿದೆ.

ಡಾ.ಯಶಸ್ವಿಯವರು ಹಾವನ್ನು ಸುಮಾರು ೧೫ ದಿನಗಳ ಕಾಲ ಅಬ್ಸರ್ವೇಶಬ್ ನಲ್ಲಿಟ್ಟು ಬಳಿಕ ಸ್ನೇಕ್ ಕಿರಣ್ ಅವರು ೩ ದಿನ ಮನೆಯಲ್ಲಿಟ್ಟು ಪ್ರಸ್ತುತ ಅದನ್ನು ಬಂಟ್ವಾಳ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ಹಾಗೂ ರಕ್ಷಕ ಮನೋಜ್ ಅವರ ನೆರವಿನಿಂದ ರಕ್ಷಿತಾರಣ್ಯಕ್ಕೆ ಬಿಡಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

18 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

18 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago