Featured

ಬಂಟ್ವಾಳ: ನಾಗರಹಾವಿನ ಹೊಟ್ಟೆಯಲ್ಲಿ ಸುಣ್ಣದ ಡಬ್ಬ – ಗಾಯಗೊಂಡ ಹಾವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ – Vishwanews24

ಬಂಟ್ವಾಳ: ನಾಗರಹಾವಿನ ಹೊಟ್ಟೆಯಲ್ಲಿ ಸುಣ್ಣದ ಡಬ್ಬ – ಗಾಯಗೊಂಡ ಹಾವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಅಲಂಪುರಿ ಸಾಲು ಮರದ ತಿಮ್ಮಕ್ಕ ಉದ್ಯಾನವನದ ಸಮೀಪದ ಮನೆಯೊಂದರ ಬಳಿ ಗಾಯಗೊಂಡು ಪತ್ತೆಯಾಗಿದ್ದ ನಾಗರ ಹಾವೊಂದನ್ನು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಗುಣಮುಖಗೊಳಿಸಿ ಜೂ. ೧೯ರಂದು ಸುರಕ್ಷಿತವಾಗಿ ರಕ್ಷಿತಾರಣ್ಯಕ್ಕೆ ಬಿಡಲಾಗಿದೆ.

ಅಲಂಪುರಿ ನಿವಾಸಿ ವಸಂತಿ ಅವರ ಮನೆ ಬಳಿಯ ಬಿಲವೊಂದರಲ್ಲಿ ಜೂ. ೬ರಂದು ನಾಗರ ಹಾವೊಂದು ಪತ್ತೆಯಾಗಿದ್ದು, ಹೊರಗೆ ಬರಲು ಸಾಧ್ಯವಾಗದೆ ಒದ್ದಾಡುತ್ತಿತ್ತು. ಅವರು ಉರಗ ಪ್ರೇಮಿ ಸ್ನೇಕ್ ಕಿರಣ್ ಗೆ ತಿಳಿಸಿದ್ದರು. ಬಳಿಕ ಅವರು ಹಾವನ್ನು ಬಿಲದಿಂದ ಹೊರಗೆ ತೆಗೆದಿದ್ದು, ಆದರೆ ಅದರ ಹೊಟ್ಟೆ ಹಾಗೂ ಕುತ್ತಿಗೆಗೆ ಗಾಯವಾಗಿತ್ತು.

ಕಿರಣ್ ಅವರು ಅದನ್ನು ಮಂಗಳೂರಿಗೆ ಕೊಂಡು ಹೋಗಿ ಪಶುವೈದ್ಯ ಡಾ.ಯಶಸ್ವಿ ಅವರ ಬಳಿ ತೋರಿಸಿದರು. ಪರೀಕ್ಷಿಸಿದ ವೈದ್ಯರು ಪ್ರಾರಂಭದಲ್ಲಿ ಹರಿದ ಚರ್ಮಕ್ಕೆ ಹೊಲಿಗೆ ಹಾಕಿದ್ದು, ಆದರೂ ಅದರ ಹೊಟ್ಟೆಯಲ್ಲಿ ಏನೋ ಇದೆ ಎಂದು ಸಂಶಯಗೊಂಡು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆಗ ಹೊಟ್ಟೆಯೊಳಗೆ ಸುಣ್ಣ ತುಂಬುವ ಪ್ಲಾಸ್ಟಿಕ್ ಪತ್ತೆಯಾಗಿದ್ದು, ಅದನ್ನು ಯಶಸ್ವಿಯಾಗಿ ಹೊರಗೆ ತೆಗೆಯಲಾಗಿದೆ.

ಡಾ.ಯಶಸ್ವಿಯವರು ಹಾವನ್ನು ಸುಮಾರು ೧೫ ದಿನಗಳ ಕಾಲ ಅಬ್ಸರ್ವೇಶಬ್ ನಲ್ಲಿಟ್ಟು ಬಳಿಕ ಸ್ನೇಕ್ ಕಿರಣ್ ಅವರು ೩ ದಿನ ಮನೆಯಲ್ಲಿಟ್ಟು ಪ್ರಸ್ತುತ ಅದನ್ನು ಬಂಟ್ವಾಳ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ಹಾಗೂ ರಕ್ಷಕ ಮನೋಜ್ ಅವರ ನೆರವಿನಿಂದ ರಕ್ಷಿತಾರಣ್ಯಕ್ಕೆ ಬಿಡಲಾಗಿದೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

4 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

10 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

10 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

11 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

12 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

12 hours ago