ಬಂಟ್ವಾಳ: ನಾಪತ್ತೆಯಾಗಿದ್ದ ಆಟೋ ರಿಕ್ಷಾ ಚಾಲಕ ಗಿರೀಶ್ (37) ಅವರ ಮೃತದೇಹ ಶುಕ್ರವಾರ ಸಂಜೆ ಫಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ.
ಗಿರೀಶ್ ಗುರುವಾರ ಮುಂಜಾನೆ ಬಾಡಿಗೆ ಹೋಗಲು ಇದೆ ಎಂದು ಹೇಳಿ ಮನೆಯಿಂದ ತೆರಳಿದ್ದು, ಈ ವೇಳೆ ಗಸ್ತುನಲ್ಲಿದ್ದ ಪೊಲೀಸರು ಪೊಳಲಿ ಸೇತುವೆ ಮೇಲೆ ರಿಕ್ಷಾ ಒಂದು ಅಡ್ಡವಾಗಿ ನಿಂತಿದ್ದನ್ನು ಗಮನಿಸಿದ್ದಾರೆ. ಬಳಿಕ ಪರಿಶೀಲನೆ ನಡೆಸಿದ ಪೊಲೀಸರು ರಿಕ್ಷಾದಲ್ಲಿ ಯಾರೂ ಇಲ್ಲದೇ ಇರುವುದರಿಂದ ಗಿರೀಶನ ಮನೆಗೆ ಮಾಹಿತಿ ತಿಳಿಸಿದ್ದಾರೆ. ಇನ್ನು ಗಿರೀಶ್ ಅಡ್ಡೂರು-ಪೊಳಲಿ ಸೇತುವೆಯ ಮೇಲೆ ವಾಹನ ನಿಲ್ಲಿಸಿ ಫಲ್ಗುಣಿ ನದಿಗೆ ಹಾರಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಗಿರೀಶ್ ಅವರ ಮೃತದೇಹವು ಅಡ್ಡೂರಿನ ಕೆಳಗಿನಕೆರೆಯಲ್ಲಿ ಪತ್ತೆಯಾಗಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಗಿರೀಶ್ ಅವರ ಆತ್ಮಹತ್ಯೆಗೆ ಕಾರಣ ಇನ್ನು ತಿಳಿದುಬಂದಿಲ್ಲ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…