ಬಂಟ್ವಾಳ: ನಾಪತ್ತೆಯಾಗಿದ್ದ ಆಟೋ ರಿಕ್ಷಾ ಚಾಲಕ ಗಿರೀಶ್ (37) ಅವರ ಮೃತದೇಹ ಶುಕ್ರವಾರ ಸಂಜೆ ಫಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ.
ಗಿರೀಶ್ ಗುರುವಾರ ಮುಂಜಾನೆ ಬಾಡಿಗೆ ಹೋಗಲು ಇದೆ ಎಂದು ಹೇಳಿ ಮನೆಯಿಂದ ತೆರಳಿದ್ದು, ಈ ವೇಳೆ ಗಸ್ತುನಲ್ಲಿದ್ದ ಪೊಲೀಸರು ಪೊಳಲಿ ಸೇತುವೆ ಮೇಲೆ ರಿಕ್ಷಾ ಒಂದು ಅಡ್ಡವಾಗಿ ನಿಂತಿದ್ದನ್ನು ಗಮನಿಸಿದ್ದಾರೆ. ಬಳಿಕ ಪರಿಶೀಲನೆ ನಡೆಸಿದ ಪೊಲೀಸರು ರಿಕ್ಷಾದಲ್ಲಿ ಯಾರೂ ಇಲ್ಲದೇ ಇರುವುದರಿಂದ ಗಿರೀಶನ ಮನೆಗೆ ಮಾಹಿತಿ ತಿಳಿಸಿದ್ದಾರೆ. ಇನ್ನು ಗಿರೀಶ್ ಅಡ್ಡೂರು-ಪೊಳಲಿ ಸೇತುವೆಯ ಮೇಲೆ ವಾಹನ ನಿಲ್ಲಿಸಿ ಫಲ್ಗುಣಿ ನದಿಗೆ ಹಾರಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಗಿರೀಶ್ ಅವರ ಮೃತದೇಹವು ಅಡ್ಡೂರಿನ ಕೆಳಗಿನಕೆರೆಯಲ್ಲಿ ಪತ್ತೆಯಾಗಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಗಿರೀಶ್ ಅವರ ಆತ್ಮಹತ್ಯೆಗೆ ಕಾರಣ ಇನ್ನು ತಿಳಿದುಬಂದಿಲ್ಲ.
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…