ಬಂಟ್ವಾಳ: ಫರಂಗಿಪೇಟೆಯಲ್ಲಿ ನಾಪತ್ತೆಯಾಗಿರುವ ಪಿಯು ಕಾಲೇಜು ವಿದ್ಯಾರ್ಥಿ ದಿಗಂತ್ ನಾಪತ್ತೆ ವಿಚಾರ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಬುಧವಾರ ಪ್ರಸ್ತಾಪವಾಯಿತು.
ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸ್ಪೀಕರ್ ಯು.ಟಿ.ಖಾದರ್, ತನ್ನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಫೆ.25ರಿಂದ ನಾಪತ್ತೆಯಾಗಿರುವ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣದ ತನಿಖೆ ಏನಾಯಿತು? ಆತನ ಪತ್ತೆಗೆ ಏನೆಲ್ಲ ಕ್ರಮ ಕೈಗೊಳ್ಳಲಾಗಿದೆ? ಎಂದು ಪ್ರಶ್ನಿಸಿದರು.
ದಿಗಂತ್ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಸರಕಾರಕ್ಕೆ ಸೂಚಿಸಿದರು. ಈ ವೇಳೆ ರಾಜ್ಯ ಗೃಹಸಚಿವರ ಅನುಪಸ್ಥಿತಿಯಲ್ಲಿ ಪ್ರತಿಕ್ರಿಯೆ ನೀಡಿದ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, 17 ವರ್ಷದ ದ್ವಿತೀಯ ಪಿಯು ವಿದ್ಯಾರ್ಥಿ ದಿಗಂತ್ ಫೆ.25ರಂದು ರಾತ್ರಿ 7:30ರ ಸುಮಾರಿಗೆ ದೇವಸ್ಥಾನಕ್ಕೆಂದು ಮನೆಯಿಂದ ಹೋದವ ಬಳಿಕ ನಾಪತ್ತೆಯಾಗಿದ್ದಾನೆ. ಆತನ ಮೊಬೈಲ್ ಫೋನ್ ಮತ್ತು ಚಪ್ಪಲಿ ಮನೆಯಿಂದ 200 ಮೀಟರ್ ದೂರದಲ್ಲಿ ಪತ್ತೆಯಾಗಿದೆ.
ಬಾಲಕನ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಏಳು ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು. ದಿಗಂತ್ ಮೊಬೈಲ್ ಫೋನ್ ಟ್ರೇಸ್ ಮಾಡಲಾಗುತ್ತಿದೆ. ಸದ್ಯ ಯಾವುದೇ ಮಾಹಿತಿ ಸಿಕ್ಕಿಲ್ಲ. ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಶೀಘ್ರವಾಗಿ ಪತ್ತೆ ಹಚ್ಚಲಾಗುವುದು. ವಿದ್ಯಾರ್ಥಿಗಳ ಪೋಷಕರು ಆತಂಕ ಪಡುವ ಅಗತ್ಯ ಇಲ್ಲ ಎಂದರು. ಎಲ್ಲಾ ಆಯಾಮಗಳಲ್ಲಿ ತನಿಖೆಯನ್ನು ಕೇಂದ್ರೀಕರಿಸಿ ತನಿಖೆ ನಡೆಸುವಂತೆ ಸ್ಪೀಕರ್ ಸೂಚಿಸಿದರು.
Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ರಾಜ್ಯದ…
ಶೂಟಿಂಗ್ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43)…
ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ…
ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ ಮಂಗಳೂರು: ದಕ್ಷಿಣ ಕನ್ನಡ…
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…