ಬಂಟ್ವಾಳ: ಫರಂಗಿಪೇಟೆಯಲ್ಲಿ ನಾಪತ್ತೆಯಾಗಿರುವ ಪಿಯು ಕಾಲೇಜು ವಿದ್ಯಾರ್ಥಿ ದಿಗಂತ್ ನಾಪತ್ತೆ ವಿಚಾರ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಬುಧವಾರ ಪ್ರಸ್ತಾಪವಾಯಿತು.
ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸ್ಪೀಕರ್ ಯು.ಟಿ.ಖಾದರ್, ತನ್ನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಫೆ.25ರಿಂದ ನಾಪತ್ತೆಯಾಗಿರುವ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣದ ತನಿಖೆ ಏನಾಯಿತು? ಆತನ ಪತ್ತೆಗೆ ಏನೆಲ್ಲ ಕ್ರಮ ಕೈಗೊಳ್ಳಲಾಗಿದೆ? ಎಂದು ಪ್ರಶ್ನಿಸಿದರು.
ದಿಗಂತ್ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಸರಕಾರಕ್ಕೆ ಸೂಚಿಸಿದರು. ಈ ವೇಳೆ ರಾಜ್ಯ ಗೃಹಸಚಿವರ ಅನುಪಸ್ಥಿತಿಯಲ್ಲಿ ಪ್ರತಿಕ್ರಿಯೆ ನೀಡಿದ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, 17 ವರ್ಷದ ದ್ವಿತೀಯ ಪಿಯು ವಿದ್ಯಾರ್ಥಿ ದಿಗಂತ್ ಫೆ.25ರಂದು ರಾತ್ರಿ 7:30ರ ಸುಮಾರಿಗೆ ದೇವಸ್ಥಾನಕ್ಕೆಂದು ಮನೆಯಿಂದ ಹೋದವ ಬಳಿಕ ನಾಪತ್ತೆಯಾಗಿದ್ದಾನೆ. ಆತನ ಮೊಬೈಲ್ ಫೋನ್ ಮತ್ತು ಚಪ್ಪಲಿ ಮನೆಯಿಂದ 200 ಮೀಟರ್ ದೂರದಲ್ಲಿ ಪತ್ತೆಯಾಗಿದೆ.
ಬಾಲಕನ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಏಳು ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು. ದಿಗಂತ್ ಮೊಬೈಲ್ ಫೋನ್ ಟ್ರೇಸ್ ಮಾಡಲಾಗುತ್ತಿದೆ. ಸದ್ಯ ಯಾವುದೇ ಮಾಹಿತಿ ಸಿಕ್ಕಿಲ್ಲ. ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಶೀಘ್ರವಾಗಿ ಪತ್ತೆ ಹಚ್ಚಲಾಗುವುದು. ವಿದ್ಯಾರ್ಥಿಗಳ ಪೋಷಕರು ಆತಂಕ ಪಡುವ ಅಗತ್ಯ ಇಲ್ಲ ಎಂದರು. ಎಲ್ಲಾ ಆಯಾಮಗಳಲ್ಲಿ ತನಿಖೆಯನ್ನು ಕೇಂದ್ರೀಕರಿಸಿ ತನಿಖೆ ನಡೆಸುವಂತೆ ಸ್ಪೀಕರ್ ಸೂಚಿಸಿದರು.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…