ಬಂಟ್ವಾಳ: ನಿಷೇಧಿತ ಸಂಘಟನೆಯಾದ ಪಿ.ಎಫ್.ಐ. ಹಾಗೂ ಎಸ್.ಡಿ.ಪಿ.ಐ. ಕಚೇರಿಗೆ ಎ.ಸಿ. ಮದನ್ ಮೋಹನ್ ನೇತೃತ್ವದಲ್ಲಿ ತಾಲೂಕಿನ ನಾಲ್ಕು ಕಚೇರಿ ಸೇರಿದಂತೆ ಮನೆಗೆ ಮುಂಜಾನೆ ವೇಳೆ ಬೀಗ ಹಾಕಿದ್ದಾರೆ.
ಸರಕಾರ ನಿಷೇಧ ಮಾಡಿದ ಬಳಿಕವೂ ಎಸ್.ಡಿ.ಪಿ.ಐ. ಕಚೇರಿಯಲ್ಲಿ ಪಿ.ಎಫ್.ಐ. ಸಂಘಟನೆಯ ಕಾರ್ಯಕರ್ತರು ಜಮಾಯಿಸಿ ಕೆಲಸ ಕಾರ್ಯಗಳನ್ನು ನಡೆಸುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಕಚೇರಿಗಳಿಗೆ ಬೀಗ ಹಾಕಿ, ಸಂಘಟನೆಯ ಬೋರ್ಡ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ಫರಂಗಿಪೇಟೆ, ಕೆಳಗಿನ ಪೇಟೆ ಮಂಚಿಯಲ್ಲಿರುವ ಕಚೇರಿ ಹಾಗೂ ಪರ್ಲಿಯಾದಲ್ಲಿ ಹಂಝ ಎಂಬವರ ಮನೆಯನ್ನು ಕಚೇರಿ ಮಾಡಿದ್ದು, ಈ ನಾಲ್ಕು ಕಡೆಗಳಿಗೆ ಏಕ ಕಾಲದಲ್ಲಿ ಪೋಲಿಸರ ತಂಡ ಬೀಗ ಹಾಕಿದೆ.
ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ತಾಲೂಕಿನಲ್ಲಿರುವ ಎಸ್.ಡಿ.ಪಿ.ಐ. ಕಚೇರಿಯಲ್ಲಿ ಪಿ.ಎಫ್.ಐ. ಸಂಘಟನೆಗೆ ಸೇರಿದ ವ್ಯಕ್ತಿಗಳ ಚಲನ-ವಲನಗಳ ಹಿನ್ನೆಲೆಯಲ್ಲಿ ಬೀಗ ಜಡಿಯಲು ಎ.ಸಿ. ಮದನ್ ಮೋಹನ್ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ಮಾಡಲಾಗಿತ್ತು.
ಗ್ರಾಮಾಂತರ ಎಸ್.ಐ. ಹರೀಶ್ ನೇತೃತ್ವದಲ್ಲಿ ದಾಳಿ ನಡೆಸಿ ಕಚೇರಿ ಒಳಗೆ ಸಂಪೂರ್ಣ ಪರಿಶೀಲನೆ ನಡೆಸಿ, ಬಳಿಕ ಬೀಗ ಹಾಕಲಾಯಿತು. ತಹಶೀಲ್ದಾರ್ ಸ್ಮಿತಾರಾಮು, ಪೋಲೀಸ್ ಇನ್ಸ್ ಪೆಕ್ಟರ್ ಗಳಾದ ಟಿ.ಡಿ. ನಾಗರಾಜ್, ವಿವೇಕಾನಂದ, ಬಂಟ್ವಾಳ ನಗರ ಠಾಣಾ ಎಸ್.ಐ. ಅವಿನಾಶ್, ಕಂದಾಯ ನಿರೀಕ್ಷಕ ರಾಜೇಶ್ ಹಾಗೂ ನಗರ ಪೊಲೀಸ್ ಠಾಣಾ ಅಪರಾಧ ವಿಭಾಗದ ಎಸ್.ಐ. ಕಲೈಮಾರ್, ತಾಪಂ.ಇ.ಓ ರಾಜಣ್ಣ ನೇತೃತ್ವದ ನಾಲ್ಕು ತಂಡಗಳು ದಾಳಿ ನಡೆಸಿ ಕಾರ್ಯಚರಣೆ ನಡೆಸಿದ್ದಾರೆ.
ಭಾರತ್ ಜೋಡೋ ಯಾತ್ರೆ: ನಾಳೆ ರಾಜ್ಯ ಪ್ರವೇಶಿಸಲಿದ್ದಾರೆ ರಾಹುಲ್ ಗಾಂಧಿ – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…