Featured

ಬಂಟ್ವಾಳ : ನಿಷೇಧಿತ ಸಂಘಟನೆಯಾದ ಪಿ.ಎಫ್.ಐ., ಎಸ್.ಡಿ‌.ಪಿ.ಐ. ಕಚೇರಿಗಳಿಗೆ ಬೀಗ – Vishwanews24

ಬಂಟ್ವಾಳ : ನಿಷೇಧಿತ ಸಂಘಟನೆಯಾದ ಪಿ.ಎಫ್.ಐ., ಎಸ್.ಡಿ‌.ಪಿ.ಐ. ಕಚೇರಿಗಳಿಗೆ ಬೀಗ

ಬಂಟ್ವಾಳ: ನಿಷೇಧಿತ ಸಂಘಟನೆಯಾದ ಪಿ.ಎಫ್.ಐ. ಹಾಗೂ ಎಸ್.ಡಿ‌‌.ಪಿ.ಐ. ಕಚೇರಿಗೆ ಎ.ಸಿ. ಮದನ್ ಮೋಹನ್ ನೇತೃತ್ವದಲ್ಲಿ ತಾಲೂಕಿನ ನಾಲ್ಕು ಕಚೇರಿ ಸೇರಿದಂತೆ ಮನೆಗೆ ಮುಂಜಾನೆ ವೇಳೆ ಬೀಗ ಹಾಕಿದ್ದಾರೆ.

ಸರಕಾರ ನಿಷೇಧ ಮಾಡಿದ ಬಳಿಕವೂ ಎಸ್.ಡಿ.ಪಿ.ಐ. ಕಚೇರಿಯಲ್ಲಿ ಪಿ.ಎಫ್.ಐ. ಸಂಘಟನೆಯ ಕಾರ್ಯಕರ್ತರು ಜಮಾಯಿಸಿ ಕೆಲಸ ಕಾರ್ಯಗಳನ್ನು ನಡೆಸುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಕಚೇರಿಗಳಿಗೆ ಬೀಗ ಹಾಕಿ, ಸಂಘಟನೆಯ ಬೋರ್ಡ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಟ್ವಾಳ ತಾಲೂಕಿನ ಫರಂಗಿಪೇಟೆ, ಕೆಳಗಿನ ಪೇಟೆ ಮಂಚಿಯಲ್ಲಿರುವ ಕಚೇರಿ ಹಾಗೂ ಪರ್ಲಿಯಾದಲ್ಲಿ ಹಂಝ ಎಂಬವರ ಮನೆಯನ್ನು ಕಚೇರಿ ಮಾಡಿದ್ದು, ಈ ನಾಲ್ಕು ಕಡೆಗಳಿಗೆ ಏಕ ಕಾಲದಲ್ಲಿ ಪೋಲಿಸರ ತಂಡ ಬೀಗ ಹಾಕಿದೆ.

ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ತಾಲೂಕಿನಲ್ಲಿರುವ ಎಸ್.ಡಿ.ಪಿ.ಐ. ಕಚೇರಿಯಲ್ಲಿ ಪಿ‌.ಎಫ್.ಐ. ಸಂಘಟನೆಗೆ ಸೇರಿದ ವ್ಯಕ್ತಿಗಳ ಚಲನ-ವಲನಗಳ ಹಿನ್ನೆಲೆಯಲ್ಲಿ ಬೀಗ ಜಡಿಯಲು ಎ.ಸಿ. ಮದನ್ ಮೋಹನ್ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ಮಾಡಲಾಗಿತ್ತು.

ಗ್ರಾಮಾಂತರ ಎಸ್.ಐ. ಹರೀಶ್ ನೇತೃತ್ವದಲ್ಲಿ ದಾಳಿ ನಡೆಸಿ ಕಚೇರಿ ಒಳಗೆ ಸಂಪೂರ್ಣ ಪರಿಶೀಲನೆ ನಡೆಸಿ, ಬಳಿಕ ಬೀಗ ಹಾಕಲಾಯಿತು. ತಹಶೀಲ್ದಾರ್ ಸ್ಮಿತಾರಾಮು, ಪೋಲೀಸ್ ಇನ್ಸ್ ಪೆಕ್ಟರ್ ಗಳಾದ ಟಿ.ಡಿ. ನಾಗರಾಜ್, ವಿವೇಕಾನಂದ, ಬಂಟ್ವಾಳ ನಗರ ಠಾಣಾ ಎಸ್.ಐ. ಅವಿನಾಶ್, ಕಂದಾಯ ನಿರೀಕ್ಷಕ ರಾಜೇಶ್ ಹಾಗೂ ನಗರ ಪೊಲೀಸ್‌ ಠಾಣಾ ಅಪರಾಧ ವಿಭಾಗದ ಎಸ್.ಐ. ಕಲೈಮಾರ್, ತಾಪಂ.ಇ.ಓ ರಾಜಣ್ಣ ನೇತೃತ್ವದ ನಾಲ್ಕು ತಂಡಗಳು ದಾಳಿ ನಡೆಸಿ ಕಾರ್ಯಚರಣೆ ನಡೆಸಿದ್ದಾರೆ.

ಭಾರತ್ ಜೋಡೋ ಯಾತ್ರೆ: ನಾಳೆ ರಾಜ್ಯ ಪ್ರವೇಶಿಸಲಿದ್ದಾರೆ ರಾಹುಲ್ ಗಾಂಧಿ – Vishwanews24

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

3 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

3 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

3 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

18 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

19 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

19 hours ago