ಬಂಟ್ವಾಳ: ನಿಷೇಧಿತ ಸಂಘಟನೆಯಾದ ಪಿ.ಎಫ್.ಐ. ಹಾಗೂ ಎಸ್.ಡಿ.ಪಿ.ಐ. ಕಚೇರಿಗೆ ಎ.ಸಿ. ಮದನ್ ಮೋಹನ್ ನೇತೃತ್ವದಲ್ಲಿ ತಾಲೂಕಿನ ನಾಲ್ಕು ಕಚೇರಿ ಸೇರಿದಂತೆ ಮನೆಗೆ ಮುಂಜಾನೆ ವೇಳೆ ಬೀಗ ಹಾಕಿದ್ದಾರೆ.
ಸರಕಾರ ನಿಷೇಧ ಮಾಡಿದ ಬಳಿಕವೂ ಎಸ್.ಡಿ.ಪಿ.ಐ. ಕಚೇರಿಯಲ್ಲಿ ಪಿ.ಎಫ್.ಐ. ಸಂಘಟನೆಯ ಕಾರ್ಯಕರ್ತರು ಜಮಾಯಿಸಿ ಕೆಲಸ ಕಾರ್ಯಗಳನ್ನು ನಡೆಸುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಕಚೇರಿಗಳಿಗೆ ಬೀಗ ಹಾಕಿ, ಸಂಘಟನೆಯ ಬೋರ್ಡ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ಫರಂಗಿಪೇಟೆ, ಕೆಳಗಿನ ಪೇಟೆ ಮಂಚಿಯಲ್ಲಿರುವ ಕಚೇರಿ ಹಾಗೂ ಪರ್ಲಿಯಾದಲ್ಲಿ ಹಂಝ ಎಂಬವರ ಮನೆಯನ್ನು ಕಚೇರಿ ಮಾಡಿದ್ದು, ಈ ನಾಲ್ಕು ಕಡೆಗಳಿಗೆ ಏಕ ಕಾಲದಲ್ಲಿ ಪೋಲಿಸರ ತಂಡ ಬೀಗ ಹಾಕಿದೆ.
ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ತಾಲೂಕಿನಲ್ಲಿರುವ ಎಸ್.ಡಿ.ಪಿ.ಐ. ಕಚೇರಿಯಲ್ಲಿ ಪಿ.ಎಫ್.ಐ. ಸಂಘಟನೆಗೆ ಸೇರಿದ ವ್ಯಕ್ತಿಗಳ ಚಲನ-ವಲನಗಳ ಹಿನ್ನೆಲೆಯಲ್ಲಿ ಬೀಗ ಜಡಿಯಲು ಎ.ಸಿ. ಮದನ್ ಮೋಹನ್ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ಮಾಡಲಾಗಿತ್ತು.
ಗ್ರಾಮಾಂತರ ಎಸ್.ಐ. ಹರೀಶ್ ನೇತೃತ್ವದಲ್ಲಿ ದಾಳಿ ನಡೆಸಿ ಕಚೇರಿ ಒಳಗೆ ಸಂಪೂರ್ಣ ಪರಿಶೀಲನೆ ನಡೆಸಿ, ಬಳಿಕ ಬೀಗ ಹಾಕಲಾಯಿತು. ತಹಶೀಲ್ದಾರ್ ಸ್ಮಿತಾರಾಮು, ಪೋಲೀಸ್ ಇನ್ಸ್ ಪೆಕ್ಟರ್ ಗಳಾದ ಟಿ.ಡಿ. ನಾಗರಾಜ್, ವಿವೇಕಾನಂದ, ಬಂಟ್ವಾಳ ನಗರ ಠಾಣಾ ಎಸ್.ಐ. ಅವಿನಾಶ್, ಕಂದಾಯ ನಿರೀಕ್ಷಕ ರಾಜೇಶ್ ಹಾಗೂ ನಗರ ಪೊಲೀಸ್ ಠಾಣಾ ಅಪರಾಧ ವಿಭಾಗದ ಎಸ್.ಐ. ಕಲೈಮಾರ್, ತಾಪಂ.ಇ.ಓ ರಾಜಣ್ಣ ನೇತೃತ್ವದ ನಾಲ್ಕು ತಂಡಗಳು ದಾಳಿ ನಡೆಸಿ ಕಾರ್ಯಚರಣೆ ನಡೆಸಿದ್ದಾರೆ.
ಭಾರತ್ ಜೋಡೋ ಯಾತ್ರೆ: ನಾಳೆ ರಾಜ್ಯ ಪ್ರವೇಶಿಸಲಿದ್ದಾರೆ ರಾಹುಲ್ ಗಾಂಧಿ – Vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…