Featured

ಬಂಟ್ವಾಳ : ನಿಷೇಧಿತ ಸಂಘಟನೆಯಾದ ಪಿ.ಎಫ್.ಐ., ಎಸ್.ಡಿ‌.ಪಿ.ಐ. ಕಚೇರಿಗಳಿಗೆ ಬೀಗ – Vishwanews24

ಬಂಟ್ವಾಳ : ನಿಷೇಧಿತ ಸಂಘಟನೆಯಾದ ಪಿ.ಎಫ್.ಐ., ಎಸ್.ಡಿ‌.ಪಿ.ಐ. ಕಚೇರಿಗಳಿಗೆ ಬೀಗ

ಬಂಟ್ವಾಳ: ನಿಷೇಧಿತ ಸಂಘಟನೆಯಾದ ಪಿ.ಎಫ್.ಐ. ಹಾಗೂ ಎಸ್.ಡಿ‌‌.ಪಿ.ಐ. ಕಚೇರಿಗೆ ಎ.ಸಿ. ಮದನ್ ಮೋಹನ್ ನೇತೃತ್ವದಲ್ಲಿ ತಾಲೂಕಿನ ನಾಲ್ಕು ಕಚೇರಿ ಸೇರಿದಂತೆ ಮನೆಗೆ ಮುಂಜಾನೆ ವೇಳೆ ಬೀಗ ಹಾಕಿದ್ದಾರೆ.

ಸರಕಾರ ನಿಷೇಧ ಮಾಡಿದ ಬಳಿಕವೂ ಎಸ್.ಡಿ.ಪಿ.ಐ. ಕಚೇರಿಯಲ್ಲಿ ಪಿ.ಎಫ್.ಐ. ಸಂಘಟನೆಯ ಕಾರ್ಯಕರ್ತರು ಜಮಾಯಿಸಿ ಕೆಲಸ ಕಾರ್ಯಗಳನ್ನು ನಡೆಸುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಕಚೇರಿಗಳಿಗೆ ಬೀಗ ಹಾಕಿ, ಸಂಘಟನೆಯ ಬೋರ್ಡ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಟ್ವಾಳ ತಾಲೂಕಿನ ಫರಂಗಿಪೇಟೆ, ಕೆಳಗಿನ ಪೇಟೆ ಮಂಚಿಯಲ್ಲಿರುವ ಕಚೇರಿ ಹಾಗೂ ಪರ್ಲಿಯಾದಲ್ಲಿ ಹಂಝ ಎಂಬವರ ಮನೆಯನ್ನು ಕಚೇರಿ ಮಾಡಿದ್ದು, ಈ ನಾಲ್ಕು ಕಡೆಗಳಿಗೆ ಏಕ ಕಾಲದಲ್ಲಿ ಪೋಲಿಸರ ತಂಡ ಬೀಗ ಹಾಕಿದೆ.

ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ತಾಲೂಕಿನಲ್ಲಿರುವ ಎಸ್.ಡಿ.ಪಿ.ಐ. ಕಚೇರಿಯಲ್ಲಿ ಪಿ‌.ಎಫ್.ಐ. ಸಂಘಟನೆಗೆ ಸೇರಿದ ವ್ಯಕ್ತಿಗಳ ಚಲನ-ವಲನಗಳ ಹಿನ್ನೆಲೆಯಲ್ಲಿ ಬೀಗ ಜಡಿಯಲು ಎ.ಸಿ. ಮದನ್ ಮೋಹನ್ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ಮಾಡಲಾಗಿತ್ತು.

ಗ್ರಾಮಾಂತರ ಎಸ್.ಐ. ಹರೀಶ್ ನೇತೃತ್ವದಲ್ಲಿ ದಾಳಿ ನಡೆಸಿ ಕಚೇರಿ ಒಳಗೆ ಸಂಪೂರ್ಣ ಪರಿಶೀಲನೆ ನಡೆಸಿ, ಬಳಿಕ ಬೀಗ ಹಾಕಲಾಯಿತು. ತಹಶೀಲ್ದಾರ್ ಸ್ಮಿತಾರಾಮು, ಪೋಲೀಸ್ ಇನ್ಸ್ ಪೆಕ್ಟರ್ ಗಳಾದ ಟಿ.ಡಿ. ನಾಗರಾಜ್, ವಿವೇಕಾನಂದ, ಬಂಟ್ವಾಳ ನಗರ ಠಾಣಾ ಎಸ್.ಐ. ಅವಿನಾಶ್, ಕಂದಾಯ ನಿರೀಕ್ಷಕ ರಾಜೇಶ್ ಹಾಗೂ ನಗರ ಪೊಲೀಸ್‌ ಠಾಣಾ ಅಪರಾಧ ವಿಭಾಗದ ಎಸ್.ಐ. ಕಲೈಮಾರ್, ತಾಪಂ.ಇ.ಓ ರಾಜಣ್ಣ ನೇತೃತ್ವದ ನಾಲ್ಕು ತಂಡಗಳು ದಾಳಿ ನಡೆಸಿ ಕಾರ್ಯಚರಣೆ ನಡೆಸಿದ್ದಾರೆ.

ಭಾರತ್ ಜೋಡೋ ಯಾತ್ರೆ: ನಾಳೆ ರಾಜ್ಯ ಪ್ರವೇಶಿಸಲಿದ್ದಾರೆ ರಾಹುಲ್ ಗಾಂಧಿ – Vishwanews24

Vishwa News 24

Recent Posts

ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ ಕಾರ್ಯಾರಂಭ -vishwanews24

ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ…

1 hour ago

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ :  ಸಿದ್ದರಾಮಯ್ಯ ಸ್ಪಷ್ಟನೆ -vishwanews24

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ :  ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…

7 hours ago

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…

9 hours ago

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ -vishwanews24

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…

9 hours ago

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ -vishwanews24

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…

10 hours ago

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  -vishwanews24

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  ಬೆಂಗಳೂರು…

10 hours ago