Featured

ಬಂಟ್ವಾಳ: ನೆರೆ ಸಂತ್ರಸ್ತರಿಗೆ ಹತ್ತು ಸಾವಿರ ರೂ. ಸಹಾಯ ಧನ ನೀಡಿದ ಯು.ಟಿ.ಖಾದರ್ -Vishwanews24

ಬಂಟ್ವಾಳ: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೆರೆ ಸಂತ್ರಸ್ತ ಸುಮಾರು 56 ಫಲಾನುಭವಿಗಳಿಗೆ ಸರಕಾರದಿಂದ ನೀಡಿದ ಹತ್ತು ಸಾವಿರ ರೂ ಮೊತ್ತದ ಚೆಕ್ ವಿತರಣೆಯನ್ನು ಪುದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶಾಸಕ ಮಾಜಿ ಸಚಿವ ಯು.ಟಿ.ಖಾದರ್ ನಡೆಸಿದರು.

ಬಳಿಕ ಮಾತನಾಡಿ ಮಡಿಕೇರಿಯಲ್ಲಿ ಕಳೆದ ಬಾರಿ ನೆರೆ ಸಂತ್ರಸ್ತರಿಗೆ ಪಾಕೃತಿಕ ವಿಕೋಪದಡಿಯಲ್ಲಿ ಸರಕಾರ ನೀಡಿದ ಮಾದರಿಯಲ್ಲಿ ಇಲ್ಲಿಯೂ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಗೆ ಮನವಿ ಮಾಡಲಾಗಿದೆ, ಮುಖ್ಯ ಮಂತ್ರಿ ಮನವಿಗೆ ಸ್ಪಂದಿಸುವ ಭರವಸೆ ಇದೆ ಎಂದು ಅವರು ಹೇಳಿದರು

ಪಾಕೃತಿಕ ವಿಕೋಪದಡಿಯಲ್ಲಿ ಸರಕಾರ ನೀಡುವ ಸವಲತ್ತುಗಳನ್ನು ಫಲಾನುಭವಿಗಳು ಪಡೆಯುವಂತೆ ವಿನಂತಿಸಿದರು. ನೆರೆಯ ಸಂದರ್ಭದಲ್ಲಿ ಮತ್ತು ಬಳಿಕ ಪರಿಹಾರದ ಕಾರ್ಯದಲ್ಲಿ ತಾಲೂಕಿನ ಎಲ್ಲಾ ಅಧಿಕಾರಿಗಳು ಉತ್ತಮ ವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಅವರು ಹೇಳಿದರು. ನೆರೆಯ ಸಂದರ್ಭದಲ್ಲಿ ಸಹಕಾರ ನೀಡಿದ ಸಂಘ ಸಂಸ್ಥೆಗಳನ್ನು ಗುರುತಿಸಿ ಅವರಿಗೆ ಸರಕಾರದ ವತಿಯಿಂದ ಪ್ರಶಸ್ತಿ ನೀಡಲು ಸರಕಾರದ ವತಿಯಿಂದ ವ್ಯವಸ್ಥೆ ಮಾಡಲಾಗಿದೆ ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಗ್ರಾಮ ಪಂಚಾಯತ್ ಅದ್ಯಕ್ಷ ರಮ್ಲಾನ್, ., ಜಿ.ಪಂ. ಸದಸ್ಯ ರವೀಂದ್ರ ಕಂಬಳಿ,ತಾಲೂಕು ಪಂಚಾಯತ್ ಸದಸ್ಯ ಗಣೇಶ್ ತುಂಬೆ, ತುಂಬೆ ಗ್ರಾ.ಪಂ.ಅಧ್ಯಕ್ಷೆ ಹೇಮಲತಾ ಜಿ. ಗ್ರಾಪಂ.ಸದಸ್ಯರಾದ ನಜೀರ್ ಕುಂಜತ್ಕಲ, ರಿಯಾಜ್ ಕುಂಪಣಮಜಲು,ಮಹಮ್ಮದ್ ಮೋನು, ಅಬ್ದುಲ್ ಹಮೀದ್, ಭಾಸ್ಕರ ರೈ, ಅಕ್ತರ್ ಹುಸೇನ್, ಇಕ್ಬಾಲ್, ವೃಂದಾ ಪೂಜಾರಿ, ಯೋಗೀಶ್ ಪ್ರಭು, ಎಪ್.ಎಸ್.ಮಹಮ್ಮದ್ , ಹಾಸೀರ್ ಪೆರಿಮಾರ್ ಪರಂಗಿಪೇಟೆ ಮಸೀದಿ ಅಧ್ಯಕ್ಷ ಮಹಮ್ಮದ್ ಭಾವ,  ತಹಶೀಲ್ದಾರ್ ರಶ್ಮಿ. ಎಸ್.ಆರ್, ಮಾಜಿ.ಜಿ.ಪಂ.ಸದಸ್ಯ ಉಮ್ಮರ್ ಫಾರೂಕ್ ಮಾಜಿ ತಾ.ಪಂ.ಸದಸ್ಯ ಆಸೀಪ್ ಇಕ್ಬಾಲ್, ಪ್ರಮುಖರಾದ ಎಸ್ ಅಬುಬಕರ್ ಸಜೀಪ, ದಿನೇಶ್ ಶೆಟ್ಟಿ ಕೊಟ್ಟಿಂಜ, ಕೃಷ್ಣಕುಮಾರ್ ಪೂಂಜಾ, ಮಜೀದ್ ಪೆರಿಮಾರ್ , ಇಬ್ರಾಹಿಂ ವಳವೂರು, ಹಾತೀಕ್ ಪರಂಗಿಪೇಟೆ, ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ‌.ಡಿ.ಒ.ಪ್ರೇಮಲತಾ, ಕಾರ್ಯದರ್ಶಿ ಅಶ್ಬಿನಿ, ಸಿಬ್ಬಂದಿಗಳಾದ ಅಬ್ದುಲ್ ಸಲಾಂ, ವಿನಯ ಮತ್ತು ಯಶೋಧ ಉಪಸ್ಥಿತರಿದ್ದರು. ‌

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

16 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

16 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

16 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

17 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

17 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

17 hours ago