ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಯುವಕನೋರ್ವನ ಶವ ಪತ್ತೆಯಾಗಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
ತಾಲೂಕಿನ ಸಜೀಪ ನಿವಾಸಿ ರಾಜೇಶ್ ಪೂಜಾರಿ ಸ್ಥಾನದ ಮನೆ ಎಂದು ತಿಳಿದು ಬಂದಿದೆ. ರಾಜೇಶ್ ಪೂಜಾರಿ ಸಾವಿಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.
ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ದ್ವಿ ಚಕ್ರ ವಾಹನವೊಂದು ಪತ್ತೆಯಾದ ಹಿನ್ನೆಲೆಯಲ್ಲಿ ಸಂಶಯಗೊಂಡು ಪಾಣೆಮಂಗಳೂರು ಸೇತುವೆಯಲ್ಲಿ ಸಂಚರಿಸುವ ವಾಹನ ಸವಾರರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಆರಂಭದಲ್ಲಿ ನೇತ್ರಾವತಿ ನದಿಗೆ ಯಾರೋ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅಂದಾಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ತಂಡ ಕಾರ್ಯಚರಣೆಯಲ್ಲಿ ತೊಡಗಿಸಿಕೊಂಡಿದ್ದು, ಬಳಿಕ ರಾಜೇಶ್ ಪೂಜಾರಿಯ ಮೃತದೇಹ ಪತ್ತೆಯಾಗಿದೆ. ಆ ಬಳಿಕ ಸಾರ್ವಜನಿಕರಲ್ಲಿ ಸಾವಿನ ಬಗ್ಗೆ ಊಹಾಪೋಹಗಳು ಸಂದೇಹಗಳು ಹುಟ್ಟಿ ಕೊಂಡಿದೆ.
ರಾಜೇಶ್ ಸಜೀಪ ಮನೆಯಿಂದ ಬರುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ವೇಳೆ ಹಳೆಯ ಪಾಣೆಮಂಗಳೂರು ಸೇತುವೆಯಲ್ಲಿ ದ್ವಿ ಚಕ್ರ ವಾಹನಕ್ಕೆ ಡಿಕ್ಕಿಯಾಗಿ ನೇತ್ರಾವತಿ ನದಿಗೆ ಬಿದ್ದು ಸಾವನ್ನಪ್ಪಿರಬಹುದಾ? ಎಂಬ ಸಂದೇಹ ವ್ಯಕ್ತವಾಗಿದೆ.
ದ್ವಿಚಕ್ರ ವಾಹನ ಅಪಘಾತವಾದ ಬಗ್ಗೆ ಸಂಶಯಗಳು ವ್ಯಕ್ತವಾಗಿದ್ದು, ಪೊಲಿಸರು ತನಿಖೆ ಆರಂಭಿಸಿದ್ದಾರೆ.ರಾಜೇಶ್ ಸಾವಿಗೆ ಇನ್ನಾವುದೋ ಕಾರಣವಿರಬಹುದಾ ? ಎಂಬ ಬಗ್ಗೆಯೂ ಪೋಲೀಸರು ತನಿಖೆಗೆ ಮುಂದಾಗಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…