ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಭಜರಂಗದಳ ಮುಖಂಡನ ಶವ ಪತ್ತೆಯಾಗಿದೆ.
ಭಜರಂಗದಳ ಕಲ್ಲಡ್ಕ ಪ್ರಖಂಡದ ಗೋ ರಕ್ಷಾ ಪ್ರಮುಖ್ ರಾಜೇಶ್ ಪೂಜಾರಿ (26)ಯವರ ಮೃತದೇಹ ದೊರೆತಿದೆ. ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ಪತ್ತೆಯಾಗಿದೆ.
ಸೇತುವೆಯಲ್ಲಿ ದ್ವಿಚಕ್ರವಾಹನ ಪತ್ತೆಯಾದ ಹಿನ್ನೆಲೆಯಲ್ಲಿ ಸಂಶಯಗೊಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರ ತಂಡ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಮೃತದೇಹ ಪತ್ತೆಯಾಗಿದೆ.
ರಾಜೇಶ್ ಪೂಜಾರಿ ಸಾವಿನ ಬಗ್ಗೆ ಸ್ಥಳೀಯವಾಗಿ ಅನುಮಾನ ಎದ್ದಿದ್ದು, ಆತ್ಮಹತ್ಯೆ ಅಥವಾ ಅಪಘಾತವೋ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಪುತ್ತೂರು: ಡಿವೈಡರ್ ಗೆ ಬೈಕ್ ಡಿಕ್ಕಿ ; ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್ಗಳ…
ಕ್ಯಾನ್ಸರ್ನಿಂದ ಮಲಯಾಳಂ ಕಿರುತೆರೆ ನಟ ಸಿದ್ದಾರ್ಥ ವೇಣುಗೋಪಾಲ್ ನಿಧನ ಕೊಚ್ಚಿ : ಮಲಯಾಳಂ ಕಿರುತೆರೆಯ ಜನಪ್ರಿಯ ನಟ ಸಿದ್ದಾರ್ಥ್ ವೇಣುಗೋಪಾಲ್…
ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಯಲ್ಲ, ಬಿಜೆಪಿ ರಾಜಕೀಯ ಮಾಡ್ತಿದೆ : ಸಿಎಂ ಬೆಂಗಳೂರು: ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿ ಅಲ್ಲ.…
ಇಂದು ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ…
ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು ಶಿವಮೊಗ್ಗ: ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿದ್ದ ಯುವಕನೊಬ್ಬ ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ…
ಮಹಿಳೆಯರ ಶಕ್ತಿ ನಿರ್ಲಕ್ಷಿಸಿದ ಕಾಂಗ್ರೆಸ್ ಅನ್ನು ದೇಶದ ಜನ ಕ್ಷಮಿಸುವುದಿಲ್ಲ : ಆರ್ ಅಶೋಕ್ ಬೆಂಗಳೂರು:ಮಹಿಳಾ ಮೀಸಲಿಗೆ ತಡೆವೊಡ್ಡಿದ ಕಾಂಗ್ರೆಸ್…