ಬಂಟ್ವಾಳ : ಸೋಮವಾರ ರಾತ್ರಿಯಿಂದ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಅಪಾಯದ ಮಟ್ಟ ತಲುಪುತ್ತಿದೆ. ಬಂಟ್ವಾಳದಲ್ಲಿ ಮಂಗಳವಾರ ಬೆಳಗ್ಗೆ ನೀರಿನ ಮಟ್ಟ 8.2 ಮೀ. ಗೆ ತಲುಪಿದೆ.
ಈಗಾಗಲೇ ಕೆಲವೊಂದು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ನೀರಿನ ಮಟ್ಟ ಇನ್ನೂ ಹೆಚ್ಚಾದರೆ ಪ್ರವಾಹದ ಅಪಾಯದ ಸಾಧ್ಯತೆ ಹೆಚ್ಚಿದೆ.
ಬಂಟ್ವಾಳ ನಗರ ವ್ಯಾಪ್ತಿಯಲ್ಲಿ ನದಿ ನೀರು ಏರಿಕೆಯಾಗಿದ್ದು, ನದಿ ನೀರು ರಸ್ತೆಗೆ ಬಂದು ತಲುಪಿದೆ. ಪೇಟೆ ವ್ಯಾಪ್ತಿಯ ಮಕ್ಕಳು ಹೆಚ್ಚಾಗಿ ಆಟೋ ಮತ್ತು ವ್ಯಾನ್ ಗಳಲ್ಲಿ ಶಾಲೆಗೆ ತೆರಳುತ್ತಾರೆ. ನದಿಯ ತಟಗಳಲ್ಲಿರುವ ಗ್ರಾಮಾಂತರ ಪ್ರದೇಶದ ಶಾಲೆಗಳಾದ ಬಾಳ್ತಿಲ, ಪೆರ್ನೆ, ಕಡೆಶ್ವಾಲ್ಯ, ಮತ್ತು ಇನ್ನೂ ನೀರಿನ ಅಪಾಯವುಳ್ಳ ಶಾಲೆಗಳ ಸಿಆರ್ ಪಿ, ಮತ್ತು ಎಸ್.ಡಿ.ಎಂಸಿ ಸಮಿತಿಗಳಿಗೆ ತಮ್ಮ ಹಂತದಲ್ಲೇ ರಜೆ ನೀಡುವಂತೆ ತಾಲೂಕು ತಹಶೀಲ್ದಾರ್ ಅರ್ಚನಾ ಭಟ್ ಸೂಚನೆ ನೀಡಿದ್ದಾರೆ.
ಶಿಥಿಲಗೊಂಡ ಗೋಡೆಯಿರುವ ಕಟ್ಟಡಗಳು, ದುರ್ಬಲ ಶೀಟುಗಳು, ವಿದ್ಯುತ್ ಅಪಾಯದ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ ಸಮರ್ಪಕವಾಗಿ ಇರುವ ತರಗತಿ ಕೊಠಡಿಗಳಲ್ಲಿ ಮಾತ್ರ ವಿದ್ಯಾರ್ಥಿಗಳನ್ನು ಕೂರಿಸಬೇಕು ಎಂದು ಕ್ಲಸ್ಟರ್ ಹಾಗೂ ಶಾಲಾ ಮುಖ್ಯ ಶಿಕ್ಷಕರಿಗೆ ಸೂಚಿಸಿಲಾಗಿದೆ ಎಂದು ತಹಶೀಲ್ದಾರ್ ಕಛೇರಿ ಪ್ರಕಟಣೆ ತಿಳಿಸಿದೆ.
ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು ಪಾಣೆಮಂಗಳೂರು ಸಮೀಪದ ಆಲಡ್ಕ ಪರಿಸರದಲ್ಲಿ ಸುಮಾರು 15 ಮನೆಗಳಿಗೆ ನೀರು ನುಗ್ಗಿದೆ ಎಂದು ಸ್ಥಳೀಯ ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಗುಡ್ಡೆ ಅಂಗಡಿ ತಿಳಿಸಿದ್ದಾರೆ.
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…