ಬಂಟ್ವಾಳ : ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಯುವಕನೋರ್ವನ ಮೃತದೇಹ ಗುರುವಾರ ಪತ್ತೆಯಾಗಿದೆ.
ಬಿ.ಮೂಡ ಗ್ರಾಮದ ಗೂಡಿನಬಳಿ ನಿವಾಸಿ ಮಹಮ್ಮದ್ ಎಂಬವರ ಪುತ್ರ ಇರ್ಫಾನ್ (36) ಅವರ ಮೃತದೇಹ ಎಂದು ತಿಳಿದು ಬಂದಿದೆ.
ಬಂಟ್ವಾಳ ಪುರಸಭೆಯ ಪೌರಕಾರ್ಮಿಕರು ತ್ಯಾಜ್ಯ ನಿರ್ವಹಣೆ ಕಾರ್ಯ ಮಾಡುತ್ತಿದ್ದ ವೇಳೆ ಮೃತದೇಹ ನದಿಯಲ್ಲಿ ಕಂಡು ಬಂದಿದ್ದು, ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬಂಟ್ವಾಳ ಪೊಲೀಸರು ಹಾಗೂ ಗೂಡಿನಬಳಿಯ ಸ್ಥಳೀಯರು ಮೃತದೇಹವನ್ನು ಮೇಲಕ್ಕೆತ್ತಿ, ಗುರುತು ಪತ್ತೆ ಹಚ್ಚಲು ಸಾಧ್ಯವಾಗದ ಕಾರಣಕ್ಕಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದ ಶೀತಲೀಕರಣದಲ್ಲಿ ಇಡಲಾಗಿತ್ತು.
ಸಂಜೆ ವೇಳೆ ಮೃತದೇಹದ ಗುರುತು ಪತ್ತೆಯಾಗಿದ್ದು, ಗೂಡಿನಬಳಿ ನಿವಾಸಿ ಇರ್ಫಾನ್ ಎಂದು ಹೇಳಲಾಗಿದೆ. ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಈತ ಮೂರು ವರ್ಷಗಳ ಹಿಂದೆಯಷ್ಟೆ ಊರಿಗೆ ಮರಳಿ ಬಳಿಕ ರಿಕ್ಷಾ ಖರೀದಿಸಿ ಅದರಲ್ಲಿ ದುಡಿಯುತ್ತಿದ್ದರು ಎಂದು ತಿಳಿದುಬಂದಿದ್ದು, ವಿವಾಹಿತನಾಗಿರುವ ಈತನಿಗೆ ಮೂವರು ಮಕ್ಕಳಿದ್ದಾರೆ. ಆದರೆ ಮೂರು ದಿನಗಳಿಂದ ಕಾಣೆಯಾಗಿದ್ದ ಎಂದು ಹೇಳಲಾಗಿದ್ದು, ಇಂದು ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಮೃತ ದೇಹದ ಕೈ ಗಳಲ್ಲಿ ಗಾಯಗಳಿರುವುದರಿಂದ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದು, ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ನ್ಯಾಯ ಒದಗಿಸಿಕೊಡುವಂತೆ ಕುಟುಂಬ ಮೂಲಗಳು ಪಟ್ಟು ಹಿಡಿದಿದ್ದಾರೆ.
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…
ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ…
ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…
ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…
ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…