Featured

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರುಪಾಲಾದ ಯುವಕನ ಶವ ಕೋಟೆಪುರ ಸಮುದ್ರ ತೀರದಲ್ಲಿ ಪತ್ತೆ – Vishwanews24

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರುಪಾಲಾದ ಯುವಕನ ಶವ ಕೋಟೆಪುರ ಸಮುದ್ರ ತೀರದಲ್ಲಿ ಪತ್ತೆ

ಬಂಟ್ವಾಳ: ಸಜಿಪನಡು ಗ್ರಾಮದ ತಲೆಮೊಗರುವಿನಲ್ಲಿ ಸ್ನೇಹಿತರೊಂದಿಗೆ ನೇತ್ರಾವತಿ ನದಿಯಲ್ಲಿ ಈಜಾಡಲು ಹೋಗಿ ನೀರುಪಾಲಾಗಿದ್ದ ಯುವಕನ ಮೃತದೇಹ ಉಳ್ಳಾಲ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಬುಧವಾರ ಪತ್ತೆಯಾಗಿದೆ.

ಅಶ್ವಿತ್ (19) ಶವವಾಗಿ ಪತ್ತೆಯಾದ ಯುವಕ. ತಲೆಮೊಗರು ನಾಗೇಶ್ ಗಾಣಿಗ ಅವರ ಮನೆಯಲ್ಲಿ ಮಗುವಿನ ತೊಟ್ಟಿಲು ಶಾಸ್ತ್ರ ಕಾರ್ಯಕ್ರಮದಲ್ಲಿ ಅಶ್ವಿತ್ ಭಾಗವಹಿಸಿದ್ದರು. ಕಾರ್ಯಕ್ರಮ ಮುಗಿದ ಬಳಿಕ ತಲೆಮೊಗರು ನೇತ್ರಾವತಿ ನದಿಯಲ್ಲಿ ಸಂಬಂಧಿಕ ಸ್ನೇಹಿತರೊಂದಿಗೆ ಅಶ್ವಿತ್ ಈಜಾಡಲು ತೆರಳಿದ್ದರು. ಈ ವೇಳೆ ಅಶ್ವಿತ್ ಮತ್ತು ಹರ್ಷ ಎಂಬಾತ ನೀರುಪಾಲಾಗಿದ್ದಾರೆ. ಈ ವೇಳೆ ಜತೆಯಲ್ಲಿದ್ದ ಇತರ ಯುವಕರು ಹರ್ಷನನ್ನು ರಕ್ಷಿಸಿ ಮೇಲಕ್ಕೆತ್ತಿದರಾದರೂ ಅಶ್ವಿತ್‌ನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಗೆಳೆಯರು ನೋಡನೋಡುತ್ತಿದ್ದಂತೇ ಅಶ್ವಿತ್ ನೀರುಪಾಲಾಗಿ ನಾಪತ್ತೆಯಾಗಿದ್ದರು.

ನಾಪತ್ತೆಯಾಗಿದ್ದ ಅಶ್ವಿನ್‌ಗಾಗಿ ಪೊಲೀಸ್, ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸೇರಿ ಕಳೆದ ಮೂರು ದಿನಗಳಿಂದ ಹುಡುಕಾಟ ನಡೆಸುತ್ತಿದ್ದರು. ಇಂದು ಬೆಳಗ್ಗೆ ಕೋಡಿಯ ಸಮುದ್ರತೀರದಲ್ಲಿ ಆತನ ಶವ ಪತ್ತೆಯಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Vishwa News 24

Recent Posts

ಅರಿಶಿಣ ಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ – vishwanews24

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…

11 hours ago

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆ. ಎನ್ ರಾಜಣ್ಣ ಸ್ಫೋಟಕ ಹೇಳಿಕೆ – vishwanews24

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್‌…

12 hours ago

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ – vishwanews24

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…

12 hours ago

ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ – vishwanews24

ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್‌ಪೋಸ್ಟ್‌ ಬಳಿ …

12 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಕೊಲ್ಲೂರು:…

12 hours ago

ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ – vishwanews24

ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಬೆಳಗಾವಿ : ಕಾಂಗ್ರೆಸ್ ಯಾವತ್ತೂ…

13 hours ago