ಬಂಟ್ವಾಳ: ಸಜಿಪನಡು ಗ್ರಾಮದ ತಲೆಮೊಗರುವಿನಲ್ಲಿ ಸ್ನೇಹಿತರೊಂದಿಗೆ ನೇತ್ರಾವತಿ ನದಿಯಲ್ಲಿ ಈಜಾಡಲು ಹೋಗಿ ನೀರುಪಾಲಾಗಿದ್ದ ಯುವಕನ ಮೃತದೇಹ ಉಳ್ಳಾಲ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಬುಧವಾರ ಪತ್ತೆಯಾಗಿದೆ.
ಅಶ್ವಿತ್ (19) ಶವವಾಗಿ ಪತ್ತೆಯಾದ ಯುವಕ. ತಲೆಮೊಗರು ನಾಗೇಶ್ ಗಾಣಿಗ ಅವರ ಮನೆಯಲ್ಲಿ ಮಗುವಿನ ತೊಟ್ಟಿಲು ಶಾಸ್ತ್ರ ಕಾರ್ಯಕ್ರಮದಲ್ಲಿ ಅಶ್ವಿತ್ ಭಾಗವಹಿಸಿದ್ದರು. ಕಾರ್ಯಕ್ರಮ ಮುಗಿದ ಬಳಿಕ ತಲೆಮೊಗರು ನೇತ್ರಾವತಿ ನದಿಯಲ್ಲಿ ಸಂಬಂಧಿಕ ಸ್ನೇಹಿತರೊಂದಿಗೆ ಅಶ್ವಿತ್ ಈಜಾಡಲು ತೆರಳಿದ್ದರು. ಈ ವೇಳೆ ಅಶ್ವಿತ್ ಮತ್ತು ಹರ್ಷ ಎಂಬಾತ ನೀರುಪಾಲಾಗಿದ್ದಾರೆ. ಈ ವೇಳೆ ಜತೆಯಲ್ಲಿದ್ದ ಇತರ ಯುವಕರು ಹರ್ಷನನ್ನು ರಕ್ಷಿಸಿ ಮೇಲಕ್ಕೆತ್ತಿದರಾದರೂ ಅಶ್ವಿತ್ನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಗೆಳೆಯರು ನೋಡನೋಡುತ್ತಿದ್ದಂತೇ ಅಶ್ವಿತ್ ನೀರುಪಾಲಾಗಿ ನಾಪತ್ತೆಯಾಗಿದ್ದರು.
ನಾಪತ್ತೆಯಾಗಿದ್ದ ಅಶ್ವಿನ್ಗಾಗಿ ಪೊಲೀಸ್, ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸೇರಿ ಕಳೆದ ಮೂರು ದಿನಗಳಿಂದ ಹುಡುಕಾಟ ನಡೆಸುತ್ತಿದ್ದರು. ಇಂದು ಬೆಳಗ್ಗೆ ಕೋಡಿಯ ಸಮುದ್ರತೀರದಲ್ಲಿ ಆತನ ಶವ ಪತ್ತೆಯಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…