ಬಂಟ್ವಾಳ : ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ನಾವೂರ ಗ್ರಾಮದ ನೀರಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಉಳ್ಳಾಲ ನಿವಾಸಿ ಅನ್ಸಾರ್ ಎಂಬವರ ಪುತ್ರಿ ಅಶ್ರಾ (11) ಹಾಗೂ ಇಲ್ಯಾಸ್ ಅವರ ಪುತ್ರಿ ಮರಿಯಮ್ ನಾಶಿಯಾ (14) ಎಂದು ಗುರುತಿಸಲಾಗಿದೆ.
ಮೂಲತಃ ನಾವೂರ ನಿವಾಸಿಯಾದ ಇಲ್ಯಾಸ್ ಇಂದು ನಾವೂರ ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಸಂಜೆ ವೇಳೆ ಮನೆಯವರ ಜೊತೆಗೆ ನಾವೂರಿನ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿದ್ದು, ಮನೆಯವರ ಮುಂದೆ ಮಕ್ಕಳು ನೀರಿನಲ್ಲಿ ಆಟ ಆಡುತ್ತಾ ಇದ್ದರು. ಈ ವೇಳೆ ಈ ಎರಡು ಮಕ್ಕಳು ನೀರಿನಲ್ಲಿ ಮುಳುಗಿದ್ದಾರೆ.
ಇಬ್ಬರು ಬಾಲಕಿಯರು ನೀರಿನಲ್ಲಿ ಮುಳುಗುವುದನ್ನು ಮನೆಯವರು ಕಣ್ಣಾರೆ ಕಂಡರೂ ಈಜು ಬಾರದ ಕಾರಣ ಮಕ್ಕಳನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…