ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ. ನದಿಗೆ ಹಾರುವುದನ್ನು ಪುತ್ರಿ ಹಾಗೂ ಮಹಿಳೆಯ ತಂದೆ ತಡೆಯಲು ಯತ್ನಿಸಿದರೂ ಅವರಿಂದ ತಪ್ಪಿಸಿಕೊಂಡು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ ಯಶೋಧಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಘಟನೆಯ ಕುರಿತು ಆಕೆಯ ಪುತ್ರಿ ಸಂಪ್ರೀತಾ ನೀಡಿದ ದೂರಿನಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಯಶೋಧ ಅವರು ಮೂರ್ಛೆ ರೋಗದಿಂದ ಬಳಲುತ್ತಿದ್ದು ಕೆಲವೊಂದು ಬಾರಿ ತೀವ್ರ ಕೋಪಕ್ಕೆ ಒಳಗಾಗಿ ಜಗಳ ಮಾಡುತ್ತಿದ್ದರು. ಹೀಗಾಗಿ ಯಶೋಧ ಅವರ ಗಂಡ 10 ವರ್ಷದ ಹಿಂದೆ ಅವರನ್ನು ಬಿಟ್ಟು ಹೋಗಿದ್ದರು ಎಂದು ತಿಳಿದುಬಂದಿದೆ.
ಏ.೧೫ ರಂದು ರಾತ್ರಿ ಕೂಡಾ ತಾಯಿ ಜತೆ ಜಗಳ ಮಾಡಿ ಮಲಗಿದ್ದು , ಮಂಗಳವಾರ ಬೆಳಗ್ಗೆ ಎದ್ದು ಕೆಲಸಕ್ಕೆ ಹೋಗಿದ್ದ ಯಶೋಧಾ 9 ರ ಸುಮಾರಿಗೆ ಕರೆ ಮಾಡಿ ತಾನು ಫರಂಗಿಪೇಟೆಯಲ್ಲಿದ್ದು ತನಗೆ ಬದುಕುವುದು ಇಷ್ಟವಿಲ್ಲ ಎಂದು ಕರೆ ಕಡಿತ ಮಾಡಿದ್ದರು. ಈ ವೇಳೆ ಆಕೆಯ ಪುತ್ರಿ ಹಾಗೂ ತಂದೆ ಆಟೋದಲ್ಲಿ ತಕ್ಷಣ ಸ್ಥಳಕ್ಕೆ ತೆರಳಿದಾದ ನದಿ ಕಡೆ ವೇಗವಾಗಿ ಹೋಗುತ್ತಿದ್ದು, ಓಡಿ ಹೋಗಿ ಹಿಡಿದಾಗ ತಪ್ಪಿಸಿಕೊಂಡು ಏಕಾಏಕಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…