ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ಬಿರುಕು ಕಂಡ ಹಿನ್ನೆಲೆಯಲ್ಲಿ ಘನಗಾತ್ರದ ವಾಹನಗಳು ಸಂಚಾರ ನಿಷೇಧ ಹೇರಿ ಇಲಾಖೆ ಹಾಕಲಾಗಿದ್ದ ಕಬ್ಬಿಣದ ತಡೆಗೆ ವಾಹನವೊಂದು ಡಿಕ್ಕಿ ಹೊಡೆದ ಘಟನೆ ಶನಿವಾರ (ಅ.21) ಬೆಳಿಗ್ಗೆ ನಡೆದಿದೆ.
ಶತಮಾನದ ಉಕ್ಕಿನ ಸೇತುವೆಯಾಗಿರುವ ಪಾಣೆಮಂಗಳೂರು ಬ್ರಿಡ್ಜ್ ನ ಮಧ್ಯ ಭಾಗದಲ್ಲಿ ಸಣ್ಣದಾದ ಬಿರುಕು ಕಂಡ ಕಾರಣಕ್ಕಾಗಿ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಲಾರಿ ಸಹಿತ ಇತರ ಘನವಾಹನಗಳು ಸಂಚಾರ ಮಾಡದಂತೆ ಪುರಸಭೆ ಸೇತುವೆಯ ಎರಡು ಬದಿಗಳಲ್ಲಿ ಕಬ್ಬಿಣದ ಪಿಲ್ಲರ್ ಗಳನ್ನು ಹಾಕಿ ಅದರ ಮೇಲೆ ಅಡ್ಡಲಾಗಿ ರಾಡ್ ಹಾಕಲಾಗಿತ್ತು.
ಆದರೆ ಸೇತುವೆ ಪ್ರವೇಶಕ್ಕೆ ಮೊದಲು ಘನಗಾತ್ರದ ವಾಹನಗಳ ನಿರ್ಬಂಧ ಮಾಡಲಾಗಿರುವ ಬಗ್ಗೆ ಯಾವುದೇ ಸೂಚನಾ ಫಲಕಗಳನ್ನು ಹಾಕದ ಹಿನ್ನೆಲೆಯಲ್ಲಿ ಅರಿವಿಲ್ಲದೆ ಗೂಡ್ಸ್ ಟೆಂಪೋವೊಂದು ಸೇತುವೆಯಲ್ಲಿ ಸಂಚಾರ ಮಾಡಿದಾಗ ರಾಡ್ ಕೆಳಕ್ಕುರಳಿ ಬಿದ್ದಿದೆ.
ಅದೃಷ್ಟವಶಾತ್ ರಾಡ್ ಬೀಳುವ ವೇಳೆ ಹಿಂಬದಿಯಿಂದ ವಾಹನವಿಲ್ಲದ ಕಾರಣಕ್ಕಾಗಿ ಯಾವುದೇ ಪ್ರಾಣಹಾನಿ ನಡೆದಿಲ್ಲ. ಕಾಮಗಾರಿ ನಡೆಸಿದವರು ಸರಿಯಾಗಿ ರಾಡನ್ನು ಅಳವಡಿಸಿಲ್ಲ ಎಂಬ ಆರೋಪಗಳು ಕೂಡ ಕೇಳಿ ಬಂದಿದೆ.
ಅವೈಜ್ಞಾನಿಕ ವಿಧಾನದಿಂದ ಮಾಡಿರುವ ಕಾಮಗಾರಿ ಜೀವಕ್ಕೆ ಅಪಾಯವಾಗುವ ಸಂಭವಿದೆ. ವಾಹನದ ಮೇಲ್ಬಾಗ ಡಿಕ್ಕಿಯಾದ ಪರಿಣಾಮ ರಾಡ್ ಕೆಳಗುರುಳಿದೆ. ಬಳಿಕ ಕೆಲಹೊತ್ತು ಸಂಚಾರಕ್ಕೆ ಅಡ್ಡಿಯಾಗಿತ್ತು. ಸ್ಥಳೀಯರು ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟ ಬಳಿಕ ಮತ್ತೆ ರಾಡನ್ನು ಮೇಲಕ್ಕೆ ಸಿಕ್ಕಿಸಿದ್ದಾರೆ. ಮತ್ತೆ ಘನಗಾತ್ರದ ವಾಹನಗಳು ಗೊತ್ತಿಲ್ಲದೆ ಸೇತುವೆಯಲ್ಲಿ ಸಂಚಾರ ಮಾಡಿ ಕಬ್ಬಿಣದ ರಾಡ್ ಮತ್ತೆ ಬೀಳುವ ಸ್ಥಿತಿಯಲ್ಲಿ ಇರುವುದು ಅಪಾಯಕಾರಿಯಾಗಿದೆ ಎಂದು ಸ್ಥಳೀಯರ ವಾದವಾಗಿದೆ.
ಇಲಾಖೆ ಕಾಮಗಾರಿ ಮಾಡುವಾಗ ಅದರಿಂದಾಗುವ ಪರಿಣಾಮಗಳ ಬಗ್ಗೆ ಅರಿತು ಕೆಲಸ ಮಾಡಬೇಕಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…