Featured

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ರಾಡ್ ಗೆ ವಾಹನ ಡಿಕ್ಕಿ ; ತಪ್ಪಿದ ಅನಾಹುತ – Vishwanews24

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ರಾಡ್ ಗೆ ವಾಹನ ಡಿಕ್ಕಿ ; ತಪ್ಪಿದ ಅನಾಹುತ

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ಬಿರುಕು ಕಂಡ ಹಿನ್ನೆಲೆಯಲ್ಲಿ ಘನಗಾತ್ರದ ವಾಹನಗಳು ಸಂಚಾರ ನಿಷೇಧ ಹೇರಿ ಇಲಾಖೆ ಹಾಕಲಾಗಿದ್ದ ಕಬ್ಬಿಣದ ತಡೆಗೆ ವಾಹನವೊಂದು ಡಿಕ್ಕಿ ಹೊಡೆದ ಘಟನೆ ಶನಿವಾರ (ಅ.21) ಬೆಳಿಗ್ಗೆ ನಡೆದಿದೆ.

ಶತಮಾನದ ಉಕ್ಕಿನ ಸೇತುವೆಯಾಗಿರುವ ಪಾಣೆಮಂಗಳೂರು ಬ್ರಿಡ್ಜ್ ನ ಮಧ್ಯ ಭಾಗದಲ್ಲಿ ಸಣ್ಣದಾದ ಬಿರುಕು ಕಂಡ ಕಾರಣಕ್ಕಾಗಿ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಲಾರಿ ಸಹಿತ ಇತರ ಘನವಾಹನಗಳು ಸಂಚಾರ ಮಾಡದಂತೆ ಪುರಸಭೆ ಸೇತುವೆಯ ಎರಡು ಬದಿಗಳಲ್ಲಿ ಕಬ್ಬಿಣದ ಪಿಲ್ಲರ್ ಗಳನ್ನು ಹಾಕಿ ಅದರ ಮೇಲೆ ಅಡ್ಡಲಾಗಿ ರಾಡ್ ಹಾಕಲಾಗಿತ್ತು.

ಆದರೆ ಸೇತುವೆ ಪ್ರವೇಶಕ್ಕೆ ಮೊದಲು ಘನಗಾತ್ರದ ವಾಹನಗಳ ನಿರ್ಬಂಧ ಮಾಡಲಾಗಿರುವ ಬಗ್ಗೆ ಯಾವುದೇ ಸೂಚನಾ ಫಲಕಗಳನ್ನು ಹಾಕದ ಹಿನ್ನೆಲೆಯಲ್ಲಿ ಅರಿವಿಲ್ಲದೆ ಗೂಡ್ಸ್ ಟೆಂಪೋವೊಂದು ಸೇತುವೆಯಲ್ಲಿ ಸಂಚಾರ ಮಾಡಿದಾಗ ರಾಡ್ ಕೆಳಕ್ಕುರಳಿ ಬಿದ್ದಿದೆ.

ಅದೃಷ್ಟವಶಾತ್ ರಾಡ್ ಬೀಳುವ ವೇಳೆ ಹಿಂಬದಿಯಿಂದ ವಾಹನವಿಲ್ಲದ ಕಾರಣಕ್ಕಾಗಿ ಯಾವುದೇ ಪ್ರಾಣಹಾನಿ ನಡೆದಿಲ್ಲ. ‌ಕಾಮಗಾರಿ ನಡೆಸಿದವರು ಸರಿಯಾಗಿ ರಾಡನ್ನು ಅಳವಡಿಸಿಲ್ಲ ಎಂಬ ಆರೋಪಗಳು ಕೂಡ ಕೇಳಿ ಬಂದಿದೆ.

ಅವೈಜ್ಞಾನಿಕ ವಿಧಾನದಿಂದ ಮಾಡಿರುವ ಕಾಮಗಾರಿ ಜೀವಕ್ಕೆ ಅಪಾಯವಾಗುವ ಸಂಭವಿದೆ. ವಾಹನದ ಮೇಲ್ಬಾಗ ಡಿಕ್ಕಿಯಾದ ಪರಿಣಾಮ ರಾಡ್ ಕೆಳಗುರುಳಿದೆ. ಬಳಿಕ ಕೆಲಹೊತ್ತು ಸಂಚಾರಕ್ಕೆ ಅಡ್ಡಿಯಾಗಿತ್ತು. ಸ್ಥಳೀಯರು ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟ ಬಳಿಕ ಮತ್ತೆ ರಾಡನ್ನು ಮೇಲಕ್ಕೆ ಸಿಕ್ಕಿಸಿದ್ದಾರೆ. ಮತ್ತೆ ಘನಗಾತ್ರದ ವಾಹನಗಳು ಗೊತ್ತಿಲ್ಲದೆ ಸೇತುವೆಯಲ್ಲಿ ಸಂಚಾರ ಮಾಡಿ ಕಬ್ಬಿಣದ ರಾಡ್ ಮತ್ತೆ ಬೀಳುವ ಸ್ಥಿತಿಯಲ್ಲಿ ಇರುವುದು ಅಪಾಯಕಾರಿಯಾಗಿದೆ ಎಂದು ಸ್ಥಳೀಯರ ವಾದವಾಗಿದೆ.

ಇಲಾಖೆ ಕಾಮಗಾರಿ ಮಾಡುವಾಗ ಅದರಿಂದಾಗುವ ಪರಿಣಾಮಗಳ ಬಗ್ಗೆ ಅರಿತು ಕೆಲಸ ಮಾಡಬೇಕಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago