ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ಬಿರುಕು ಕಂಡ ಹಿನ್ನೆಲೆಯಲ್ಲಿ ಘನಗಾತ್ರದ ವಾಹನಗಳು ಸಂಚಾರ ನಿಷೇಧ ಹೇರಿ ಇಲಾಖೆ ಹಾಕಲಾಗಿದ್ದ ಕಬ್ಬಿಣದ ತಡೆಗೆ ವಾಹನವೊಂದು ಡಿಕ್ಕಿ ಹೊಡೆದ ಘಟನೆ ಶನಿವಾರ (ಅ.21) ಬೆಳಿಗ್ಗೆ ನಡೆದಿದೆ.
ಶತಮಾನದ ಉಕ್ಕಿನ ಸೇತುವೆಯಾಗಿರುವ ಪಾಣೆಮಂಗಳೂರು ಬ್ರಿಡ್ಜ್ ನ ಮಧ್ಯ ಭಾಗದಲ್ಲಿ ಸಣ್ಣದಾದ ಬಿರುಕು ಕಂಡ ಕಾರಣಕ್ಕಾಗಿ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಲಾರಿ ಸಹಿತ ಇತರ ಘನವಾಹನಗಳು ಸಂಚಾರ ಮಾಡದಂತೆ ಪುರಸಭೆ ಸೇತುವೆಯ ಎರಡು ಬದಿಗಳಲ್ಲಿ ಕಬ್ಬಿಣದ ಪಿಲ್ಲರ್ ಗಳನ್ನು ಹಾಕಿ ಅದರ ಮೇಲೆ ಅಡ್ಡಲಾಗಿ ರಾಡ್ ಹಾಕಲಾಗಿತ್ತು.
ಆದರೆ ಸೇತುವೆ ಪ್ರವೇಶಕ್ಕೆ ಮೊದಲು ಘನಗಾತ್ರದ ವಾಹನಗಳ ನಿರ್ಬಂಧ ಮಾಡಲಾಗಿರುವ ಬಗ್ಗೆ ಯಾವುದೇ ಸೂಚನಾ ಫಲಕಗಳನ್ನು ಹಾಕದ ಹಿನ್ನೆಲೆಯಲ್ಲಿ ಅರಿವಿಲ್ಲದೆ ಗೂಡ್ಸ್ ಟೆಂಪೋವೊಂದು ಸೇತುವೆಯಲ್ಲಿ ಸಂಚಾರ ಮಾಡಿದಾಗ ರಾಡ್ ಕೆಳಕ್ಕುರಳಿ ಬಿದ್ದಿದೆ.
ಅದೃಷ್ಟವಶಾತ್ ರಾಡ್ ಬೀಳುವ ವೇಳೆ ಹಿಂಬದಿಯಿಂದ ವಾಹನವಿಲ್ಲದ ಕಾರಣಕ್ಕಾಗಿ ಯಾವುದೇ ಪ್ರಾಣಹಾನಿ ನಡೆದಿಲ್ಲ. ಕಾಮಗಾರಿ ನಡೆಸಿದವರು ಸರಿಯಾಗಿ ರಾಡನ್ನು ಅಳವಡಿಸಿಲ್ಲ ಎಂಬ ಆರೋಪಗಳು ಕೂಡ ಕೇಳಿ ಬಂದಿದೆ.
ಅವೈಜ್ಞಾನಿಕ ವಿಧಾನದಿಂದ ಮಾಡಿರುವ ಕಾಮಗಾರಿ ಜೀವಕ್ಕೆ ಅಪಾಯವಾಗುವ ಸಂಭವಿದೆ. ವಾಹನದ ಮೇಲ್ಬಾಗ ಡಿಕ್ಕಿಯಾದ ಪರಿಣಾಮ ರಾಡ್ ಕೆಳಗುರುಳಿದೆ. ಬಳಿಕ ಕೆಲಹೊತ್ತು ಸಂಚಾರಕ್ಕೆ ಅಡ್ಡಿಯಾಗಿತ್ತು. ಸ್ಥಳೀಯರು ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟ ಬಳಿಕ ಮತ್ತೆ ರಾಡನ್ನು ಮೇಲಕ್ಕೆ ಸಿಕ್ಕಿಸಿದ್ದಾರೆ. ಮತ್ತೆ ಘನಗಾತ್ರದ ವಾಹನಗಳು ಗೊತ್ತಿಲ್ಲದೆ ಸೇತುವೆಯಲ್ಲಿ ಸಂಚಾರ ಮಾಡಿ ಕಬ್ಬಿಣದ ರಾಡ್ ಮತ್ತೆ ಬೀಳುವ ಸ್ಥಿತಿಯಲ್ಲಿ ಇರುವುದು ಅಪಾಯಕಾರಿಯಾಗಿದೆ ಎಂದು ಸ್ಥಳೀಯರ ವಾದವಾಗಿದೆ.
ಇಲಾಖೆ ಕಾಮಗಾರಿ ಮಾಡುವಾಗ ಅದರಿಂದಾಗುವ ಪರಿಣಾಮಗಳ ಬಗ್ಗೆ ಅರಿತು ಕೆಲಸ ಮಾಡಬೇಕಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…