Featured

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ರಾಡ್ ಗೆ ವಾಹನ ಡಿಕ್ಕಿ ; ತಪ್ಪಿದ ಅನಾಹುತ – Vishwanews24

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ರಾಡ್ ಗೆ ವಾಹನ ಡಿಕ್ಕಿ ; ತಪ್ಪಿದ ಅನಾಹುತ

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ಬಿರುಕು ಕಂಡ ಹಿನ್ನೆಲೆಯಲ್ಲಿ ಘನಗಾತ್ರದ ವಾಹನಗಳು ಸಂಚಾರ ನಿಷೇಧ ಹೇರಿ ಇಲಾಖೆ ಹಾಕಲಾಗಿದ್ದ ಕಬ್ಬಿಣದ ತಡೆಗೆ ವಾಹನವೊಂದು ಡಿಕ್ಕಿ ಹೊಡೆದ ಘಟನೆ ಶನಿವಾರ (ಅ.21) ಬೆಳಿಗ್ಗೆ ನಡೆದಿದೆ.

ಶತಮಾನದ ಉಕ್ಕಿನ ಸೇತುವೆಯಾಗಿರುವ ಪಾಣೆಮಂಗಳೂರು ಬ್ರಿಡ್ಜ್ ನ ಮಧ್ಯ ಭಾಗದಲ್ಲಿ ಸಣ್ಣದಾದ ಬಿರುಕು ಕಂಡ ಕಾರಣಕ್ಕಾಗಿ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಲಾರಿ ಸಹಿತ ಇತರ ಘನವಾಹನಗಳು ಸಂಚಾರ ಮಾಡದಂತೆ ಪುರಸಭೆ ಸೇತುವೆಯ ಎರಡು ಬದಿಗಳಲ್ಲಿ ಕಬ್ಬಿಣದ ಪಿಲ್ಲರ್ ಗಳನ್ನು ಹಾಕಿ ಅದರ ಮೇಲೆ ಅಡ್ಡಲಾಗಿ ರಾಡ್ ಹಾಕಲಾಗಿತ್ತು.

ಆದರೆ ಸೇತುವೆ ಪ್ರವೇಶಕ್ಕೆ ಮೊದಲು ಘನಗಾತ್ರದ ವಾಹನಗಳ ನಿರ್ಬಂಧ ಮಾಡಲಾಗಿರುವ ಬಗ್ಗೆ ಯಾವುದೇ ಸೂಚನಾ ಫಲಕಗಳನ್ನು ಹಾಕದ ಹಿನ್ನೆಲೆಯಲ್ಲಿ ಅರಿವಿಲ್ಲದೆ ಗೂಡ್ಸ್ ಟೆಂಪೋವೊಂದು ಸೇತುವೆಯಲ್ಲಿ ಸಂಚಾರ ಮಾಡಿದಾಗ ರಾಡ್ ಕೆಳಕ್ಕುರಳಿ ಬಿದ್ದಿದೆ.

ಅದೃಷ್ಟವಶಾತ್ ರಾಡ್ ಬೀಳುವ ವೇಳೆ ಹಿಂಬದಿಯಿಂದ ವಾಹನವಿಲ್ಲದ ಕಾರಣಕ್ಕಾಗಿ ಯಾವುದೇ ಪ್ರಾಣಹಾನಿ ನಡೆದಿಲ್ಲ. ‌ಕಾಮಗಾರಿ ನಡೆಸಿದವರು ಸರಿಯಾಗಿ ರಾಡನ್ನು ಅಳವಡಿಸಿಲ್ಲ ಎಂಬ ಆರೋಪಗಳು ಕೂಡ ಕೇಳಿ ಬಂದಿದೆ.

ಅವೈಜ್ಞಾನಿಕ ವಿಧಾನದಿಂದ ಮಾಡಿರುವ ಕಾಮಗಾರಿ ಜೀವಕ್ಕೆ ಅಪಾಯವಾಗುವ ಸಂಭವಿದೆ. ವಾಹನದ ಮೇಲ್ಬಾಗ ಡಿಕ್ಕಿಯಾದ ಪರಿಣಾಮ ರಾಡ್ ಕೆಳಗುರುಳಿದೆ. ಬಳಿಕ ಕೆಲಹೊತ್ತು ಸಂಚಾರಕ್ಕೆ ಅಡ್ಡಿಯಾಗಿತ್ತು. ಸ್ಥಳೀಯರು ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟ ಬಳಿಕ ಮತ್ತೆ ರಾಡನ್ನು ಮೇಲಕ್ಕೆ ಸಿಕ್ಕಿಸಿದ್ದಾರೆ. ಮತ್ತೆ ಘನಗಾತ್ರದ ವಾಹನಗಳು ಗೊತ್ತಿಲ್ಲದೆ ಸೇತುವೆಯಲ್ಲಿ ಸಂಚಾರ ಮಾಡಿ ಕಬ್ಬಿಣದ ರಾಡ್ ಮತ್ತೆ ಬೀಳುವ ಸ್ಥಿತಿಯಲ್ಲಿ ಇರುವುದು ಅಪಾಯಕಾರಿಯಾಗಿದೆ ಎಂದು ಸ್ಥಳೀಯರ ವಾದವಾಗಿದೆ.

ಇಲಾಖೆ ಕಾಮಗಾರಿ ಮಾಡುವಾಗ ಅದರಿಂದಾಗುವ ಪರಿಣಾಮಗಳ ಬಗ್ಗೆ ಅರಿತು ಕೆಲಸ ಮಾಡಬೇಕಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Vishwa News 24

Recent Posts

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

28 minutes ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

45 minutes ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

54 minutes ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

1 hour ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

2 hours ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

2 hours ago