ಬಂಟ್ವಾಳ: ಬೈಕ್ ಪ್ರಪಾತಕ್ಕೆ ಬಿದ್ದು ಬೈಕಿನಲ್ಲಿ ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ಯುವಕ ಮೃತಪಟ್ಟ ಘಟನೆ ಇಂದು ಮುಂಜಾವಿನ ವೇಳೆ ಬಂಟ್ವಾಳ ಬಿಸಿರೋಡಿನಲ್ಲಿ ನಡೆದಿದೆ.
ಇಲ್ಲಿನ ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದ್ದು ಮೃತನನ್ನು ಮಂಗಳೂರು ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಚಿಕ್ಕಮಗಳೂರಿನ ಯಶೋಧರ (25) ಎಂದು ಗುರುತ್ತಿಸಲಾಗಿದೆ. ಈತನ ಸ್ನೇಹಿತ ಬೈಕ್ ಚಲಾಯಿಸುತ್ತಿದ್ದ ಅವಿನಾಶ್ ಅಲ್ಪಸ್ವಲ್ಪ ಗಾಯಗಳೊಂದಿಗೆ ಯಾವುದೇ ಪ್ರಾಣಾಪಯವಿಲ್ಲದೆ ಪಾರಾಗಿದ್ದಾನೆ.
ಇವರಿಬ್ಬರೂ ಮಂಗಳೂರು ಸಿಟಿ ಸೆಂಟರ್ ನಲ್ಲಿ ಉದ್ಯೋಗಿಗಳಾಗಿದ್ದು,ಬೆಳ್ತಂಗಡಿಯಲ್ಲಿ ಸ್ನೇಹಿತನ ಮನೆಯಲ್ಲಿ ನಡೆಯುವ ಕೋಲಕ್ಕೆ ಹೋಗಿ ಅಲ್ಲಿಂದ ಸುಮಾರು 3.30 ಗಂಟೆ ವೇಳೆಗೆ ಬರುತ್ತಿರುವಾಗ ಬಿಸಿರೋಡಿನ ಕೈಕಂಬ ಸಮೀಪದ ಕೆ.ಎಸ್.ಆರ್.ಟಿ.ಸಿ.ಬಸ್ ಡಿಪೋ ದ ಬಳಿ ಬೈಕ್ ಸುಮಾರು ಹತ್ತಕ್ಕೂ ಅಧಿಕ ಅಡಿ ಇರುವ ಆಳಕ್ಕೆ ಉರುಳಿ ಬಿದ್ದಿದೆ.
ಅಪಘಾತಕ್ಕೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಮೆಲ್ಕಾರ್ ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…