Featured

ಬಂಟ್ವಾಳ: ಬಸ್ಸಿನಲ್ಲಿ 20ಲಕ್ಷ ರೂ ಮೌಲ್ಯದ ಚಿನ್ನ ಕಳವು ಪ್ರಕರಣ: ಆರೋಪಿ ಬಂಧನ – vishwanews24

ಬಂಟ್ವಾಳ: ಬಸ್ಸಿನಲ್ಲಿ 20ಲಕ್ಷ ರೂ ಮೌಲ್ಯದ ಚಿನ್ನ ಕಳವು ಪ್ರಕರಣ: ಆರೋಪಿ ಬಂಧನ

ಬಂಟ್ವಾಳ: ಸುಮಾರು ಐದು ತಿಂಗಳ ಹಿಂದೆ ಬಸ್ ನಲ್ಲಿ ಬ್ಯಾಗ್ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣವನ್ನು ಭೇದಿಸುವಲ್ಲಿ ಬಂಟ್ವಾಳ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮೂಲದ ಆರೋಪಿಯನ್ನು ಬಂಧಿಸಿ, ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

2025ರ ನವೆಂಬರ್ 19ರಂದು ಬ್ರಹ್ಮಾವರ ಮೂಲದ ದಂಪತಿಗಳು ದುರ್ಗಾಂಬಾ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿರುವ ‘ಸಮುದ್ರ ಹೋಟೆಲ್’ ಬಳಿ ಬಸ್ ನಿಂತಿದ್ದ ಸಂದರ್ಭದಲ್ಲಿ, ದಂಪತಿಗಳ ಬ್ಯಾಗ್ನಲ್ಲಿದ್ದ 180 ಗ್ರಾಂ ತೂಕದ (ಅಂದಾಜು 20 ಲಕ್ಷ ರೂ. ಮೌಲ್ಯದ) ಚಿನ್ನಾಭರಣಗಳನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:👇

ಪೊಲೀಸರು ತನಿಖೆ ಚುರುಕುಗೊಳಿಸಿ, ಕೃತ್ಯ ಎಸಗಿದ ಮಧ್ಯಪ್ರದೇಶ ನಿವಾಸಿ ಸಮದ್ ಖಾನ್ (37) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯಿಂದ ಕಳವು ಮಾಡಲಾದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದ್ದು, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಎ.ಎಸ್.ಪಿ ಯಶ್ ಕುಮಾರ್ ಶರ್ಮಾ ನಿರ್ದೇಶನದಂತೆ, ತನಿಖಾಧಿಕಾರಿ ಹಾಗೂ ಬಂಟ್ವಾಳ ನಗರ ಇನ್ಸ್ಪೆಕ್ಟರ್ ಅನಂತ ಪದ್ಮನಾಭ ನೇತೃತ್ವದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಸಂದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ವಿಜಯ್ ಕುಮಾರ್. ಸುರೇಶ್ ಕುಮಾರ್, ರಾಜೇಶ್, ಇರ್ಷಾದ್ ಪಿ. ಬಸವರಾಜ್, ವಿಜಯ್ ಕುಮಾರ್, ಮಪಿಸಿ ರೇವತಿ ಹಾಗೂ ಜಿಲ್ಲಾ ಪೊಲೀಸ್ ಘಟಕದ ಗಣಕಯಂತ್ರ ಘಟಕದ ಸಂಪತ್ ಕುಮಾರ್ ಮತ್ತು ದಿವಾಕರ್ ಈ ಯಶಸ್ವಿ, ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ:👇

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago