Featured

ಬಂಟ್ವಾಳ : ಬಸ್‌ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ; ಪರಾರಿಯಾಗಿದ್ದ ಆರೋಪಿ ಬಂಧನ – Vishwanews24

ಬಂಟ್ವಾಳ : ಸ್ಲೀಪರ್ ಕೋಚ್ ಬಸ್‌ ನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನ..

ಬೆಳ್ತಂಗಡಿ ಮೂಲದ ಮಹಮ್ಮದ್ ಅಝೀಮ್ ಬಂಧಿತ ಆರೋಪಿ..

ಬಸ್ಸಿನ ಕಿಟಕಿಯಿಂದ ಹೊರಗೆ ಹಾರಿ ಪರಾರಿಯಾಗಿದ್ದ ಆರೋಪಿ..

ಬಂಟ್ವಾಳ : ಖಾಸಗಿ ಬಸ್ಸಿನಲ್ಲಿ ಬೆಂಗಳೂರಿನಿಂದ ಊರಿಗೆ ಪ್ರಯಾಣಿಸುತ್ತಿದ್ದ ಬಂಟ್ವಾಳ ಮೂಲದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿ ಮೂಲದ ಮಹಮ್ಮದ್ ಅಝೀಮ್ ಬಂಧಿತ ಆರೋಪಿಯಾಗಿದ್ದಾನೆ. ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಸಹಪ್ರಯಾಣಿಕನಾಗಿದ್ದ ಆರೋಪಿ ಅಝೀಮ್ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದ. ಮೂಲತಃ ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಫ್ಯಾಶನ್ ಡಿಸೈನರ್ ಕಲಿಯುತ್ತಿದ್ದು ಮಂಗಳವಾರ ರಾತ್ರಿ ಖಾಸಗಿ ಬಸ್ಸಿನಲ್ಲಿ ಊರಿಗೆ ಪ್ರಯಾಣಿಸಿದ್ದರು.

ಬಸ್‌ ಸಕಲೇಶಪುರ ಕಳೆದು ಮುಂದಕ್ಕೆ ಸಾಗುತ್ತಿದ್ದಂತೆಯೇ ಮಲಗಿದ್ದ ಯುವತಿಯ ಮೈಮೇಲೆ ಸಹಪ್ರಯಾಣಿಕ ಕೈ ಮಾಡಿರುವುದು ಕಂಡು ಬಂತು. ಬಳಿಕ ಮತ್ತೊಮ್ಮೆ ಇದೇ ಯತ್ನ ನಡೆದಾಗ ಕೃತ್ಯವನ್ನು ಬಸ್ಸಿನ ಚಾಲಕನ ಗಮನಕ್ಕೆ ತಂದರು. ಆದರೆ ಚಾಲಕನಿಂದ ಯಾವುದೇ ಸ್ಪಂದನೆ ದೊರೆಯದಿದ್ದಾಗ, ಬಸ್ಸಿನಲ್ಲಿದ್ದ ಕೆಲವು ಸಹ ಪ್ರಯಾಣಿಕರು ನೆರವಿಗೆ ಧಾವಿಸಿ ಆತನನ್ನು ವಿಚಾರಿಸಿದಾಗ ಬೆಳ್ತಂಗಡಿಯ ಲಾಯಿಲ ಗ್ರಾಮದ ಮಹಮ್ಮದ್ ಅಝೀಮ್ ಎಂದು ತಿಳಿಸಿದ್ದ. ಮುಂದಕ್ಕೆ ದಾರಿ ಮಧ್ಯೆ ಸಿಗುವ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸುವ ಎಂದು ಆಕೆ ಹೇಳಿದ ಬಳಿಕ ಆರೋಪಿ ಬಸ್ಸಿನ ಕಿಟಕಿಯಿಂದ ಹೊರಗೆ ಹಾರಿ ಪರಾರಿಯಾಗಿದ್ದ.ಪ್ರಕರಣವನ್ನು ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ಲಭ್ಯ ಮಾಹಿತಿಗಳನ್ನಾಧರಿಸಿ ಆರೋಪಿ ಮಹಮ್ಮದ್ ಅಝೀಮ್ ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

23 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

23 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

23 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

24 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

24 hours ago