ಬಂಟ್ವಾಳ : ಖಾಸಗಿ ಬಸ್ಸಿನಲ್ಲಿ ಬೆಂಗಳೂರಿನಿಂದ ಊರಿಗೆ ಪ್ರಯಾಣಿಸುತ್ತಿದ್ದ ಬಂಟ್ವಾಳ ಮೂಲದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ಮೂಲದ ಮಹಮ್ಮದ್ ಅಝೀಮ್ ಬಂಧಿತ ಆರೋಪಿಯಾಗಿದ್ದಾನೆ. ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಸಹಪ್ರಯಾಣಿಕನಾಗಿದ್ದ ಆರೋಪಿ ಅಝೀಮ್ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದ. ಮೂಲತಃ ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಫ್ಯಾಶನ್ ಡಿಸೈನರ್ ಕಲಿಯುತ್ತಿದ್ದು ಮಂಗಳವಾರ ರಾತ್ರಿ ಖಾಸಗಿ ಬಸ್ಸಿನಲ್ಲಿ ಊರಿಗೆ ಪ್ರಯಾಣಿಸಿದ್ದರು.
ಬಸ್ ಸಕಲೇಶಪುರ ಕಳೆದು ಮುಂದಕ್ಕೆ ಸಾಗುತ್ತಿದ್ದಂತೆಯೇ ಮಲಗಿದ್ದ ಯುವತಿಯ ಮೈಮೇಲೆ ಸಹಪ್ರಯಾಣಿಕ ಕೈ ಮಾಡಿರುವುದು ಕಂಡು ಬಂತು. ಬಳಿಕ ಮತ್ತೊಮ್ಮೆ ಇದೇ ಯತ್ನ ನಡೆದಾಗ ಕೃತ್ಯವನ್ನು ಬಸ್ಸಿನ ಚಾಲಕನ ಗಮನಕ್ಕೆ ತಂದರು. ಆದರೆ ಚಾಲಕನಿಂದ ಯಾವುದೇ ಸ್ಪಂದನೆ ದೊರೆಯದಿದ್ದಾಗ, ಬಸ್ಸಿನಲ್ಲಿದ್ದ ಕೆಲವು ಸಹ ಪ್ರಯಾಣಿಕರು ನೆರವಿಗೆ ಧಾವಿಸಿ ಆತನನ್ನು ವಿಚಾರಿಸಿದಾಗ ಬೆಳ್ತಂಗಡಿಯ ಲಾಯಿಲ ಗ್ರಾಮದ ಮಹಮ್ಮದ್ ಅಝೀಮ್ ಎಂದು ತಿಳಿಸಿದ್ದ. ಮುಂದಕ್ಕೆ ದಾರಿ ಮಧ್ಯೆ ಸಿಗುವ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸುವ ಎಂದು ಆಕೆ ಹೇಳಿದ ಬಳಿಕ ಆರೋಪಿ ಬಸ್ಸಿನ ಕಿಟಕಿಯಿಂದ ಹೊರಗೆ ಹಾರಿ ಪರಾರಿಯಾಗಿದ್ದ.ಪ್ರಕರಣವನ್ನು ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ಲಭ್ಯ ಮಾಹಿತಿಗಳನ್ನಾಧರಿಸಿ ಆರೋಪಿ ಮಹಮ್ಮದ್ ಅಝೀಮ್ ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…