ಬಂಟ್ವಾಳ : ಖಾಸಗಿ ಬಸ್ಸಿನಲ್ಲಿ ಬೆಂಗಳೂರಿನಿಂದ ಊರಿಗೆ ಪ್ರಯಾಣಿಸುತ್ತಿದ್ದ ಬಂಟ್ವಾಳ ಮೂಲದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ಮೂಲದ ಮಹಮ್ಮದ್ ಅಝೀಮ್ ಬಂಧಿತ ಆರೋಪಿಯಾಗಿದ್ದಾನೆ. ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಸಹಪ್ರಯಾಣಿಕನಾಗಿದ್ದ ಆರೋಪಿ ಅಝೀಮ್ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದ. ಮೂಲತಃ ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಫ್ಯಾಶನ್ ಡಿಸೈನರ್ ಕಲಿಯುತ್ತಿದ್ದು ಮಂಗಳವಾರ ರಾತ್ರಿ ಖಾಸಗಿ ಬಸ್ಸಿನಲ್ಲಿ ಊರಿಗೆ ಪ್ರಯಾಣಿಸಿದ್ದರು.
ಬಸ್ ಸಕಲೇಶಪುರ ಕಳೆದು ಮುಂದಕ್ಕೆ ಸಾಗುತ್ತಿದ್ದಂತೆಯೇ ಮಲಗಿದ್ದ ಯುವತಿಯ ಮೈಮೇಲೆ ಸಹಪ್ರಯಾಣಿಕ ಕೈ ಮಾಡಿರುವುದು ಕಂಡು ಬಂತು. ಬಳಿಕ ಮತ್ತೊಮ್ಮೆ ಇದೇ ಯತ್ನ ನಡೆದಾಗ ಕೃತ್ಯವನ್ನು ಬಸ್ಸಿನ ಚಾಲಕನ ಗಮನಕ್ಕೆ ತಂದರು. ಆದರೆ ಚಾಲಕನಿಂದ ಯಾವುದೇ ಸ್ಪಂದನೆ ದೊರೆಯದಿದ್ದಾಗ, ಬಸ್ಸಿನಲ್ಲಿದ್ದ ಕೆಲವು ಸಹ ಪ್ರಯಾಣಿಕರು ನೆರವಿಗೆ ಧಾವಿಸಿ ಆತನನ್ನು ವಿಚಾರಿಸಿದಾಗ ಬೆಳ್ತಂಗಡಿಯ ಲಾಯಿಲ ಗ್ರಾಮದ ಮಹಮ್ಮದ್ ಅಝೀಮ್ ಎಂದು ತಿಳಿಸಿದ್ದ. ಮುಂದಕ್ಕೆ ದಾರಿ ಮಧ್ಯೆ ಸಿಗುವ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸುವ ಎಂದು ಆಕೆ ಹೇಳಿದ ಬಳಿಕ ಆರೋಪಿ ಬಸ್ಸಿನ ಕಿಟಕಿಯಿಂದ ಹೊರಗೆ ಹಾರಿ ಪರಾರಿಯಾಗಿದ್ದ.ಪ್ರಕರಣವನ್ನು ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ಲಭ್ಯ ಮಾಹಿತಿಗಳನ್ನಾಧರಿಸಿ ಆರೋಪಿ ಮಹಮ್ಮದ್ ಅಝೀಮ್ ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…