ಬಂಟ್ವಾಳ: ಶಂಕಿತ ಬಾಂಗ್ಲಾ ಪ್ರಜೆಗೆ ಪಾಸ್ ಪೋರ್ಟ್ ಮಾಡಿಕೊಡಲು ಸಹಾಯ ಮಾಡಿದ ಆರೋಪದ ಮೇಲೆ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ವಿಟ್ಲ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಪ್ರದೀಪ್ ಎಂದು ಗುರುತಿಸಲಾಗಿದೆ. ಶಂಕಿತ ಬಾಂಗ್ಲಾ ಪ್ರಜೆ ಶಕ್ತಿದಾಸ್ ಎಂಬಾತನಿಗೆ ಪಾಸ್ ಪೋರ್ಟ್ ಪಡೆಯಲು ಸಹಾಯ ಆರೋಪ ಇವರ ಮೇಲಿದೆ. ಅದೇ ಠಾಣೆಯ ಕಾನ್ಸ್ಟೇಬಲ್ ಸಾಬೀ ಮಿರ್ಜಿ ನೀಡಿದ ದೂರಿನ ಆಧಾರದ ಮೇಲೆ ಕಾನ್ಸ್ಟೇಬಲ್ ಪ್ರದೀಪ್ ನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಹಿಂದೆ ಶಕ್ತಿದಾಸ್ ನೀಡಿದ್ದ ಪಾಸ್ ಪೋರ್ಟ್ ಅರ್ಜಿಯನ್ನು ಸಾಬೀ ಮಿರ್ಜಿ ತಿರಸ್ಕರಿಸಿದ್ದರು. ಆದರೆ ಇತ್ತೀಚೆಗೆ ಸಾಬೀ ಮಿರ್ಜಿ ಕರ್ತವ್ಯ ನಿಮಿತ್ತ ಬೇರೆ ಕಡೆಗೆ ಹೋದಾಗ ಕಾನ್ಸ್ಟೇಬಲ್ ಪ್ರದೀಪ್ ಸಹಾಯ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆರೋಪಿ ಕಾನ್ಸ್ಟೇಬಲ್ ಪ್ರದೀಪ್ ನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…