ಬಂಟ್ವಾಳ: ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಜಂಟಿ ಆಶ್ರಯದಲ್ಲಿ ಬಿ.ಸಿ.ರೋಡು ಪ್ಲೈ ಓವರ್ ನ ಕೆಳಭಾಗದಲ್ಲಿ ಎ.24ರಂದು 2023ರ ಮಹಿಳಾ ಮೀಸಲಾತಿ ಬಿಲ್ ಜಾರಿಗೆ ತರದೇ ದೇಶದ ಮಹಿಳೆಯರಿಗೆ ಸುಳ್ಳು ಹೇಳಿ ದ್ರೋಹ ಮಾಡಿದ ಬಿಜೆಪಿ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದೆ, ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆ ನೀಡಿದೆ. ಆದರೆ ಬಿಜೆಪಿಯಾಗಲಿ ಅಥವಾ ಆರ್.ಎಸ್.ಎಸ್. ಆಗಲಿ ಮಹಿಳೆಯರಿಗೆ ನೀಡಿದ ಅವಕಾಶಗಳ ಬಗ್ಗೆ ತಿಳಿಸಲಿ. ಆದರೆ ಬಿಜೆಪಿ ಮಹಿಳೆಯರ ಮೀಸಲಾತಿ ವಿಚಾರವನ್ನು ಜನರ ಮುಂದಿಟ್ಟು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಆರೋಪ ಮಾಡಿದರು.
ಇದನ್ನೂ ಓದಿ:
ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜ, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾಧ್ಯಕ್ಷೆ ಉಷಾ ಅಂಚನ್, ಪ್ರಮುಖರಾದ ಆರ್.ಪದ್ಮರಾಜ್, ಲಾವಣ್ಯ ಬಲ್ಲಾಳ್, ಶಾಲೆಟ್ ಪಿಂಟೊ ಪ್ರತಿಭಟನೆಯಲ್ಲಿ ಮಾತನಾಡಿದರು. ಕಾಂಗ್ರೇಸ್ ಪ್ರಮುಖರಾದ ಐಡಾ ಸುರೇಶ್, ಅಮಿತಾ ಭಂಡಾರಿ, ಆಸ್ಮಾ ಹಸೈನಾರ್, ಎ.ಬಿ.ಅಬ್ದುಲ್ಲಾ ಕೊಳ್ನಾಡು, ಬೇಬಿ ಕುಂದರ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…