ಬಂಟ್ವಾಳ:ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ @ ಕೇಶವ ( 37) ಕಾಣೆಯಾದವರು.
ದೂರಿನಲ್ಲಿ ಏನಿದು?
ದೂರುದಾರರ ಪ್ರಕಾರ, ಮೊಡಾಂಕಾಪುವಿನಲ್ಲಿರುವ 7Spices India Pvt Ltd ನಲ್ಲಿ ಸೆಲ್ಸ್ ಮ್ಯಾನ ಆಗಿ ಕೆಲಸ ಮಾಡುತ್ತಿದ್ದ ಚೆನ್ನಕೇಶವ ಅವರು, ಎಂದಿನಂತೆ ಅ.25ರಂದು ಮನೆಯಿಂದ ಹೋಗಿ ಅಲ್ಲಿಂದ ಮಸಾಲೆ ಪದಾರ್ಥಗಳನ್ನು ಲೈನ್ ಸೆಲ್ಸ ಬಗ್ಗೆ ವಾಹನದಲ್ಲಿ ಚಾಲಕ ಹರಿದಾಸ್ ರವರ ಜೊತೆಗೆ ಹೋಗಿ ಲೈನ್ ಕೆಲಸ ಮುಗಿಸಿ ಮಧ್ಯಾಹ್ನ 2.30 ಗಂಟೆಗೆ ಪಂಪುವೆಲ್ನಲ್ಲಿ ಇಳಿದು ಬೇರೆ ಕೆಲಸ ಮುಗಿಸಿ ಕಂಪೆನಿಗೆ ಬರುವುದಾಗಿ ತಿಳಿಸಿ ಹೋಗಿದ್ದರು.
ನಂತರ ಮದ್ಯಾಹ್ನ 3.30 ಗಂಟೆಗೆ ಚನ್ನಕೇಶವ @ ಕೇಶವ ಅವರು ದೂರುದಾರ ಅತ್ತಿಗೆಗೆ ಕರೆ ಮಾಡಿ ತಾನು ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗುತ್ತಿದ್ದು, ಮೊಬೈಲ್ನಲ್ಲಿ ಚಾರ್ಜ್ ಇಲ್ಲದ ಕಾರಣ ಸ್ವಿಚ್ ಆಫ್ ಆಗುತ್ತದೆ. ನಾಲ್ಕು ದಿನ ಬಿಟ್ಟು ಕರೆ ಮಾಡುವುದಾಗಿ ತಿಳಿಸಿ ಈವರೆಗೆ ಕರೆ ಮಾಡಿರುವುದಿಲ್ಲ.
ಚನ್ನಕೇಶವ ಸಂಬಂಧಿಕರ ಮನೆಗೂ ,ಕಂಪೆನಿಯ ಕೆಲಸಕ್ಕೂ ಹಾಗೂ ಮನೆಗೆ ಬಾರದೆ ಕಾಣೆಯಾಗಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ. ಕಾಣೆಯಾದ ವ್ಯಕ್ತಿಯ ಸುಳಿವು ಸಿಕ್ಕಲ್ಲಿ ( ಮೊ.9535971261) ಅವರನ್ನು ಸಂಪರ್ಕಿಸಲು ಕೋರಲಾಗಿದೆ.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…