ಬಂಟ್ವಾಳ:ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ @ ಕೇಶವ ( 37) ಕಾಣೆಯಾದವರು.
ದೂರಿನಲ್ಲಿ ಏನಿದು?
ದೂರುದಾರರ ಪ್ರಕಾರ, ಮೊಡಾಂಕಾಪುವಿನಲ್ಲಿರುವ 7Spices India Pvt Ltd ನಲ್ಲಿ ಸೆಲ್ಸ್ ಮ್ಯಾನ ಆಗಿ ಕೆಲಸ ಮಾಡುತ್ತಿದ್ದ ಚೆನ್ನಕೇಶವ ಅವರು, ಎಂದಿನಂತೆ ಅ.25ರಂದು ಮನೆಯಿಂದ ಹೋಗಿ ಅಲ್ಲಿಂದ ಮಸಾಲೆ ಪದಾರ್ಥಗಳನ್ನು ಲೈನ್ ಸೆಲ್ಸ ಬಗ್ಗೆ ವಾಹನದಲ್ಲಿ ಚಾಲಕ ಹರಿದಾಸ್ ರವರ ಜೊತೆಗೆ ಹೋಗಿ ಲೈನ್ ಕೆಲಸ ಮುಗಿಸಿ ಮಧ್ಯಾಹ್ನ 2.30 ಗಂಟೆಗೆ ಪಂಪುವೆಲ್ನಲ್ಲಿ ಇಳಿದು ಬೇರೆ ಕೆಲಸ ಮುಗಿಸಿ ಕಂಪೆನಿಗೆ ಬರುವುದಾಗಿ ತಿಳಿಸಿ ಹೋಗಿದ್ದರು.
ನಂತರ ಮದ್ಯಾಹ್ನ 3.30 ಗಂಟೆಗೆ ಚನ್ನಕೇಶವ @ ಕೇಶವ ಅವರು ದೂರುದಾರ ಅತ್ತಿಗೆಗೆ ಕರೆ ಮಾಡಿ ತಾನು ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗುತ್ತಿದ್ದು, ಮೊಬೈಲ್ನಲ್ಲಿ ಚಾರ್ಜ್ ಇಲ್ಲದ ಕಾರಣ ಸ್ವಿಚ್ ಆಫ್ ಆಗುತ್ತದೆ. ನಾಲ್ಕು ದಿನ ಬಿಟ್ಟು ಕರೆ ಮಾಡುವುದಾಗಿ ತಿಳಿಸಿ ಈವರೆಗೆ ಕರೆ ಮಾಡಿರುವುದಿಲ್ಲ.
ಚನ್ನಕೇಶವ ಸಂಬಂಧಿಕರ ಮನೆಗೂ ,ಕಂಪೆನಿಯ ಕೆಲಸಕ್ಕೂ ಹಾಗೂ ಮನೆಗೆ ಬಾರದೆ ಕಾಣೆಯಾಗಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ. ಕಾಣೆಯಾದ ವ್ಯಕ್ತಿಯ ಸುಳಿವು ಸಿಕ್ಕಲ್ಲಿ ( ಮೊ.9535971261) ಅವರನ್ನು ಸಂಪರ್ಕಿಸಲು ಕೋರಲಾಗಿದೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…