ಮಂಗಳೂರು: ಭಾರೀ ಮಳೆಗೆ ಮನೆ ಮೇಲೆ ಗುಡ್ಡ ಕುಸಿದು ಕೇರಳ ಮೂಲದ ಮತ್ತಿಬ್ಬರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದಲ್ಲಿ ನಡೆದಿದೆ.
ಕೊಟ್ಟಾಂ ನಿವಾಸಿ ಬಾಬು (46) ಮತ್ತು ಸಂತೋಷ್ ಅಲ್ಫೊನ್ಸಾ(46) ಮೃತಪಟ್ಟ ದುರ್ದೈವಿಗಳು. ಹೆನ್ರಿ ಕಾರ್ಲೊ ಎಂಬವರಿಗೆ ಸೇರಿದ ಮನೆಯಾಗಿದೆ. ಕಾರ್ಲೋ ಅವರ ಮನೆಯ ತೋಟದ ಕೆಲಸಕ್ಕೆ ಕೇರಳ ಮೂಲದ ಕಾರ್ಮಿಕರು ಬಂದು ಆ ಮನೆಯಲ್ಲಿ ನೆಲಸಿದ್ದರು.
ನಾಲ್ವರು ಅನೇಕ ವರ್ಷಗಳಿಂದ ಇವರ ತೋಟದ ಕೆಲಸ ಮಾಡುತ್ತಿದ್ದರು. ಕಾರ್ಲೋ ಅವರ ಮನೆಯ ಹತ್ತಿರದಲ್ಲಿ ಆ ನಾಲ್ವರು ಕಾರ್ಮಿಕರಿಗೆ ಪ್ರತ್ಯೇಕ ಮನೆ ನೀಡಿದ್ದರು. ಆದರೆ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಗುಡ್ಡ ಕುಸಿದು ಮನೆ ಮೇಲೆ ಬಿದ್ದಿತ್ತು. ಈ ಸಂದರ್ಭದಲ್ಲಿ ನಾಲ್ವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆಯೇ ಕೇರಳದ ಪಾಲಕ್ಕಾಡ್ ನಿವಾಸಿ ಬಿಜು(45) ಎಂಬವರು ಮೃತಪಟ್ಟಿದ್ದರು. ಇಂದು ಕೂಡ ಮತ್ತೆ ಇಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತ ಸಂಖ್ಯೆ 3ಕ್ಕೆ ಏರಿದೆ. ಗುಡ್ಡ ಕುಸಿದಿದ್ದರಿಂದ ಜೆಸಿಬಿ ಬಳಸಿ ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಮಣ್ಣು ತೆರವು ಮಾಡಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…