Featured

ಬಂಟ್ವಾಳ: ಮಗುವಿನ ಅನಾರೋಗ್ಯ ಹಿನ್ನೆಲೆ – ಉಕ್ರೇನ್‌ ಕುಟುಂಬದಿಂದ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಗೇಲು ಸೇವೆ – Vishwanews24

ಬಂಟ್ವಾಳ: ಮಗುವಿನ ಅನಾರೋಗ್ಯ ಹಿನ್ನೆಲೆ – ಉಕ್ರೇನ್‌ ಕುಟುಂಬದಿಂದ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಗೇಲು ಸೇವೆ

ಬಂಟ್ವಾಳ: ಕಾಂತಾರ ಸಿನಿಮಾ‌ದ ಮೂಲಕ ತುಳುನಾಡಿನ ದೈವಗಳ‌ ಮಹತ್ವ ಜಗತ್ತಿನೆಲ್ಲೆಡೆ‌ ಪಸರಿಸುತ್ತಿರುವ ಬೆನ್ನಲ್ಲೇ ಉಕ್ರೇನ್ ನ ಕುಟುಂಬವೊಂದು ಶುಕ್ರವಾರ ರಾತ್ರಿ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಗೇಲು ಸೇವೆ ನೀಡಿದೆ.

ಮಗುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಕೊರಗಜ್ಜನ ಕೋಲದಲ್ಲಿ ಹೇಳಿದ್ದ ಹರಕೆಯನ್ನು ತೀರಿಸಿರುವ ಕುಟುಂಬ ಇದೀಗ ಸಂತೃಪ್ತ ಮನೋಭಾವದೊಂದಿಗೆ ಉಕ್ರೇನ್ ಗೆ ಹೊರಡಲು ಸಜ್ಜಾಗಿ ನಿಂತಿದೆ.

ಬೆಂಗಳೂರು : ಓವರ್ ಟೇಕ್ ಮಾಡುವ ಭರದಲ್ಲಿ ಬಸ್​ಗೆ ಬೈಕ್​​ ಡಿಕ್ಕಿ.. ಇಬ್ಬರು ಸವಾರರು ಸ್ಥಳದಲ್ಲೇ ಸಾವು – Vishwanews24

ಕಳೆದ ಕೆಲ ತಿಂಗಳ ಹಿಂದೆ ಉಕ್ರೇನ್ ನಿಂದ ಭಾರತ ಪ್ರವಾಸ ಕೈಗೊಂಡಿದ್ದ ಉಕ್ರೇನ್ ಪ್ರಜೆಗಳಾದ ಆ್ಯಂಡ್ರೋ, ಪತ್ನಿ ಎಲೆನಾ ಹಾಗೂ ಮಗ ಮ್ಯಾಕ್ಸಿಂ ಉಡುಪಿಯ ಮಲ್ಪೆ ಕಡಲ ತೀರಕ್ಕೆ ಬಂದಿದ್ದರು. ಈ ಸಂದರ್ಭ ಉಡುಪಿಯ ಗೋಶಾಲೆಗೆ ತೆರಳಿದ್ದ ಈ ಕುಟುಂಬ ನಾಡಿ ನೋಡಿ ಔಷಧಿ ಕೊಡುವ ಭಕ್ತಿ ಭೂಷಣ್ ಪ್ರಭೂಜಿಯವರನ್ನು ಭೇಟಿ ಮಾಡಿದ್ದರು. ಈ ಸಂದರ್ಭ ಅನಾರೋಗ್ಯಕ್ಕೆ ಒಳಗಾಗಿದ್ದ ಮಗನ ವಿಚಾರವನ್ನು ಉಕ್ರೇನ್ ದಂಪತಿ ಗುರೂಜಿಯವರಲ್ಲಿ ತಿಳಿಸಿದ್ದು, ಅದರಂತೆ ದೇಸಿ ದನದ ಜೊತೆಗೆ ವಿಹಾರ ಸಹಿತ ನಾಟಿ ಚಿಕಿತ್ಸೆ ಆರಂಭಿಸಿದ್ದರು. ಹಾಗಾಗಿ ಕಳೆದ ಮೂರು ತಿಂಗಳಿನಿಂದ ಕುಮ್ಡೇಲುವಿನ ಶ್ರೀ ರಾಧಾ ಸುರಭೀ ಗೋಮಂದಿರದಲ್ಲಿ‌ ವಾಸ್ತವ್ಯ ಇದ್ದರು.

ಚಿಕ್ಕಮಂಗಳೂರು : ನಾಳೆಯಿಂದ ದತ್ತಮಾಲೆ ಅಭಿಯಾನ .. 1,500 ಕ್ಕೂ ಹೆಚ್ಚು ಪೊಲೀಸರ ನಿಯೋಜನೆ – Vishwanews24

ಜನ್ಮಾಷ್ಟಮಿಯ ಸಂದರ್ಭ ನಡೆದ ಕೊರಗಜ್ಜನ ಕೋಲದಲ್ಲಿ ಅನಾರೋಗ್ಯಕ್ಕೆ ಪರಿಹಾರ ನೀಡುವಂತೆ ಕೋರಿಕೊಂಡಿದ್ದರಲ್ಲದೆ, ಅಗೇಲು ಸೇವೆ ನೀಡುವುದಾಗಿ ಹರಕೆ ಹೇಳಿದ್ದರು. ಇದೀಗ ಮಗ ಮ್ಯಾಕ್ಸಿಂ ಗುಣಮುಖನಾಗಿರುವ ಹಿನ್ನೆಲೆ ಅಜ್ಜನ ಪವಾಡಕ್ಕೆ ಋಣಿಯಾಗಿ ಈ ಕುಟುಂಬ ಶುಕ್ರವಾರ ರಾತ್ರಿ ಕೊರಗಜ್ಜನಿಗೆ ಅಗೇಲು ಸೇವೆ ನೀಡಿದೆ. ಭಕ್ತಿಭೂಷಣ್ ದಾಸ್ ಪ್ರಭೂಜಿ, ಪದ್ಮನಾಭ ಗೋವಿನ ತೋಟ, ರಾಮಚಂದ್ರ ಮಾರಿಪಳ್ಳ, ಯಾದವ ಕೊಡಂಗೆ, ನವೀನ್ ಮಾರ್ಲ ಮೊದಲಾದವರ ಉಪಸ್ಥಿತಿಯಲ್ಲಿ ಅಗೇಲು ಸೇವೆ ನಡೆದಿದ್ದು, ಉಕ್ರೇನ್ ಕುಟುಂಬವೂ ಸಂತೃಪ್ತ ಮನೋಭಾವದಿಂದ ಭಾಗವಹಿಸಿತ್ತು. ಈ ಕುಟುಂಬ ಇನ್ನೆರಡು ದಿನದಲ್ಲಿ ಟರ್ಕಿಗೆ ಪ್ರಯಣಿಸಿ, ಬಳಿಕ ತಮ್ಮ ತವರು ಉಕ್ರೇನ್ ಗೆ ಪಯಣ ಬೆಳೆಸಲಿದ್ದಾರೆ.

– ಮೌನೇಶ ವಿಶ್ವಕರ್ಮ

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

8 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

8 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

8 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

8 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago