Featured

ಬಂಟ್ವಾಳ: ಮದುವೆ ಸಂಭ್ರಮದಲ್ಲಿ ಕೊರಗಜ್ಜನಿಗೆ ಅವಹೇಳನ ಪ್ರಕರಣ : ಆರೋಪಿ  ಪೊಲೀಸ್ ವಶಕ್ಕೆ – Vishwanews24

ಬಂಟ್ವಾಳ: ಮದುವೆ ಸಂಭ್ರಮದಲ್ಲಿ ಕೊರಗಜ್ಜನಿಗೆ ಅವಹೇಳನ ಪ್ರಕರಣ : ಆರೋಪಿ  ಪೊಲೀಸ್ ವಶಕ್ಕೆ – Vishwanews24

ಬಂಟ್ವಾಳ: ಸಾಲೆತ್ತೂರಿನಲ್ಲಿ ಅನ್ಯ ಧರ್ಮದ ಯುವಕರ ತಂಡವೊಂದು ಮದುವೆ ಸಂಭ್ರಮದಲ್ಲಿ ತುಳುನಾಡಿನ ಕೊರಗಜ್ಜನ ವೇಷ ಧರಿಸಿ ಅವಹೇಳನ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ವರ ಉಮರುಲ್ ಬಾಷಿತ್ ನನ್ನು ಕೇರಳದ ಕೊಚ್ಚಿಯ ನಡುಂಬನ್ ಶೇರಿ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕೇರಳದ ಕೊಚ್ಚಿಯ ನಡುಂಬನ್ ಶೇರಿ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಆರೋಪಿಯನ್ನು ಇದೀಗ ವಿಟ್ಲ ಠಾಣಾ ಪೊಲೀಸರು ಕರೆದುಕೊಂಡು ಬರುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ :

ಉಪ್ಪಳದ ಯುವಕನ ಜೊತೆ ನಡೆದಿದ್ದ ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ‌ ಮದುವೆಯಲ್ಲಿ ವಧುವಿನ‌ ಮನೆಗೆ ವರನ ಸ್ನೇಹಿತ ಬಳಗ ಆಗಮಿಸಿದ್ದು, ಈ ವೇಳೆ ವರ ಕೊರಗಜ್ಜರನ್ನು ಹೋಲುವ ವೇಷ ಭೂಷಣ ಧರಿಸಿದ್ದರು. ಈ ವೇಳೆ ಮದುಮಗ ತಲೆಗೆ ಅಡಿಕೆ ಹಾಳೆ ಟೋಪಿ, ಮುಖಕ್ಕೆ ಕಪ್ಪು ಬಣ್ಣ ಹಚ್ಚಿಕೊಂಡು ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಣಿಯುತ್ತಾ ಬಂದಿದ್ದ ಆರೋಪ ವ್ಯಕ್ತವಾಗಿ ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು.

ಈ ಸಂಬಂಧ ವಿಟ್ಲ ಪಡ್ನೂರು ಗ್ರಾಮದ ವ್ಯಕ್ತಿಯೊಬ್ಬರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹಿಂದೂಗಳ ಧಾರ್ಮಿಕ ಭಾವನೆಗೆ ಅಪಮಾನಗೊಳಿಸಿ ಧಕ್ಕೆ ತಂದಿದ್ದ, ವರ,ವಧುವಿನ ಮನೆಯವರು ಹಾಗೂ ಕೃತ್ಯದಲ್ಲಿ ತೊಡಗಿರುವ ವರನ ಸ್ನೇಹಿತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ :

Vishwa News 24

Recent Posts

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

1 hour ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

2 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

15 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

19 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

21 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

22 hours ago