ಬಂಟ್ವಾಳ: ಸಾಲೆತ್ತೂರಿನಲ್ಲಿ ಅನ್ಯ ಧರ್ಮದ ಯುವಕರ ತಂಡವೊಂದು ಮದುವೆ ಸಂಭ್ರಮದಲ್ಲಿ ತುಳುನಾಡಿನ ಕೊರಗಜ್ಜನ ವೇಷ ಧರಿಸಿ ಅವಹೇಳನ ಮಾಡಿರುವ ಆರೋಪಕ್ಕೆ ಸಂಬಂಧಿಸಿ ಇಬ್ಬರನ್ನು ವಿಟ್ಲ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಮಂಗಲ್ಪಾಡಿ ನಿವಾಸಿ ಅಹ್ಮದ್ ಮುಜಿತಾಬ್ (28) ಮತ್ತು ಬಾಯಾರು ಪದವು ನಿವಾಸಿ ಮೊಯ್ದಿನ್ ಮುನಿಶ್ (19) ಎಂದು ಗುರುತಿಸಲಾಗಿದೆ.
ಉಪ್ಪಳದ ಯುವಕನ ಜೊತೆ ನಡೆದಿದ್ದ ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆಯಲ್ಲಿ ವಧುವಿನ ಮನೆಗೆ ವರನ ಸ್ನೇಹಿತ ಬಳಗ ಆಗಮಿಸಿದ್ದು, ಈ ವೇಳೆ ವರ ಕೊರಗಜ್ಜರನ್ನು ಹೋಲುವ ವೇಷ ಭೂಷಣ ಧರಿಸಿದ್ದರು.ಈ ವೇಳೆ ಮದುಮಗ ತಲೆಗೆ ಅಡಿಕೆ ಹಾಳೆ ಟೋಪಿ, ಮುಖಕ್ಕೆ ಕಪ್ಪು ಬಣ್ಣ ಹಚ್ಚಿಕೊಂಡು ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಣಿಯುತ್ತಾ ಬಂದಿದ್ದ ಆರೋಪ ವ್ಯಕ್ತವಾಗಿ ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು.
ಈ ಸಂಬಂಧ ವಿಟ್ಲ ಪಡ್ನೂರು ಗ್ರಾಮದ ವ್ಯಕ್ತಿಯೊಬ್ಬರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹಿಂದೂಗಳ ಧಾರ್ಮಿಕ ಭಾವನೆಗೆ ಅಪಮಾನಗೊಳಿಸಿ ಧಕ್ಕೆ ತಂದಿದ್ದ, ವರ,ವಧುವಿನ ಮನೆಯವರು ಹಾಗೂ ಕೃತ್ಯದಲ್ಲಿ ತೊಡಗಿರುವ ವರನ ಸ್ನೇಹಿತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.
ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು, : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…
ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…
ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…
ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…