Featured

ಬಂಟ್ವಾಳ : ಮನೆಯಿಂದ ನಾಪತ್ತೆಯಾಗಿದ್ದ ಯುವತಿ  ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷ – Vishwanews24

ಬಂಟ್ವಾಳ : ಮನೆಯಿಂದ ನಾಪತ್ತೆಯಾಗಿದ್ದ ಯುವತಿ  ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷ

ಬಂಟ್ವಾಳ: ಮನೆಯಿಂದ ನಾಪತ್ತೆಯಾಗಿದ್ದ ಬಂಟ್ವಾಳದ ನಿವಾಸಿ ನೇಹಾ ಇದೀಗ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ಬೆಂಗಳೂರಿಗೆ ಹೋಗುವುದಾಗಿ ಮೆಸೇಜ್ ಮಾಡಿ ನಾಪತ್ತೆಯಾಗಿದ್ದ ನೇಹಾ ಕುರಿತಂತೆ ಬಂಟ್ವಾಳ ಠಾಣೆಯಲ್ಲಿ ಆಕೆಯ ಅಣ್ಣ ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಬೈಪಾಸ್ ಬಿ.ಕಸಬಾ ಗ್ರಾಮದ ಲೆಕ್ಕಸಿರಿ ಪಾದೆ ನಿವಾಸಿ ದಿ.ರಮೇಶ್ ಸಾಲಿಯಾನ್ ಅವರ ಪುತ್ರಿ ಕುಮಾರಿ ನೇಹಾ ಅವರು ನಾಪತ್ತೆಯಾಗಿ ಇದೀಗ ಪತ್ತೆಯಾದ ಯುವತಿಯಾಗಿದ್ದಾಳೆ.

ಆಕೆಯ ಅಣ್ಣ ನೀಡಿದ ದೂರಿನಂತೆ ನೇಹಾಗೆ ಮದುವೆ ಮಾಡುವ ಬಗ್ಗೆ ಸಂಬಂಧ ಹುಡುಕುವ ವೇಳೆ ನೇಹಾ ನಾನು ಸದ್ಯ ಮದುವೆ ಆಗುವುದಿಲ್ಲ ವಿದ್ಯಾಭ್ಯಾಸ ಮುಂದುವರಿಸುವ ಇಂಗಿತ ವ್ಯಕ್ತಪಡಿಸಿದ್ದಳು‌. ಈಕೆ ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು ಅಲ್ಲಿಗೆ ಎಂದು ಮನೆಯಿಂದ ಹೋದವಳು ಮನೆಗೆ ವಾಪಾಸು ಬರದೆ ನಾಪತ್ತೆಯಾಗಿದ್ದಳು.

ಅದೇ ದಿನ ಈಕೆಯ ಚಿಕ್ಕಮ್ಮಳ ಮೊಬೈಲ್ ಗೆ ಮೆಸೇಜ್ ಮಾಡಿ ನನ್ನನ್ನು ಹುಡುಕುವ ಪ್ರಯತ್ನ ಮಾಡಬೇಡಿ ನಾನು ಬೆಂಗಳೂರಿಗೆ ಹೋಗುವುದಾಗಿ ತಿಳಿಸಿದ್ದಳು. ಇದಾದ ಬಳಿಕ ಎರಡು ಪತ್ರ ಬರೆದಿದ್ದು ಅದರಲ್ಲಿ ನಾನು ಬೆಂಗಳೂರಿನಲ್ಲಿರುವುದಾಗಿ ತಿಳಿಸಿದ್ದಳು. ಎರಡು ಪತ್ರ ಕಳುಹಿಸಿದ ಬಳಿಕ ಮೊಬೈಲ್ ಕೂಡ ಸ್ವಿಚ್ ಆಪ್ ಆಗಿದ್ದು, ಮನೆಯವರ ಜೊತೆ ಯಾವುದೇ ಸಂಪರ್ಕ ಮಾಡಿರಲಿಲ್ಲ. ಈ ಕಾರಣಕ್ಕಾಗಿ ಈಕೆಯ ಸಹೋದರ ಕಾಣೆಯಾಗಿದ್ದಾಳೆ ಎಂದು ಪೋಲೀಸ್ ಠಾಣೆಗೆ ದೂರು ನೀಡಿದ್ದರು. ಹೀಗಾಗಿ ನೇಹಾ ನಿನ್ನೆ ನೇರವಾಗಿ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಹಾಜರಾಗಿದ್ದಾಳೆ.

ಅಲ್ಲದೆ ಪೋಲೀಸರಿಗೆ ಹೇಳಿಕೆಯೊಂದನ್ನು ನೀಡಿದ್ದಾಳೆ. ನಾನು ಸ್ವ ಇಚ್ಛೆಯಿಂದ ಮನೆ ಬಿಟ್ಟು ಹೋಗಿದ್ದು, ನನಗೆ ನನ್ನ ಮನೆಯವರೊಂದಿಗೆ ಹೋಗಲು ಇಚ್ಚೆ ಇರುವುದಿಲ್ಲ. ನಾನು ಮುಂದಕ್ಕೆ ವೃತ್ತಿಯೊಂದಿಗೆ ವಿದ್ಯಾಭ್ಯಾಸ ಮುಂದುವರೆಸಲು ಹಾಗೂ ಬದುಕಲು ನಿಶ್ವಯಿಸಿದ್ದು, ಅ ಉದ್ದೇಶದಿಂದ ನಾನು ಉಡುಪಿಯ ಅಜೆಕಾರು ಕುಂಜಿಬೆಟ್ಟು ಎಂಬಲ್ಲಿರುವ ಶ್ರೀ ದುರ್ಗಾ ಮಹಿಳೆಯರ ಪಿ.ಜಿಗೆ ತೆರಳಿ ಅಲ್ಲಿಯೇ ವಾಸ್ತವ್ಯ ಇದ್ದು ನನ್ನ ವಿದ್ಯಾಭ್ಯಾಸ ಮುಂದುವರಿಸಲು ಇಚ್ಚಿಸಿರುತ್ತೇನೆ ಎಂದು ತಿಳಿಸಿದ್ದಾಳೆ. ಇವಳು ನೀಡಿದ ಹೇಳಿಕೆಯನ್ನು ಮತ್ತು ನಿರ್ಧಾರವನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಮನೆಯವರಿಗೆ ತಿಳಿಸಿದ್ದು, ಅವಳನ್ನು ಕಳುಹಿಸಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago