Featured

ಬಂಟ್ವಾಳ : ಮಸೀದಿ ಅವಹೇಳನ – ಹರೀಶ್ ಪೂಂಜ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಠಾಣೆಗೆ ಮನವಿ – vishwanews24

ಬಂಟ್ವಾಳ : ಮಸೀದಿ ಅವಹೇಳನ – ಹರೀಶ್ ಪೂಂಜ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಠಾಣೆಗೆ ಮನವಿ

ಬಂಟ್ವಾಳ,: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಸೀದಿಯನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ವಿಟ್ಲ ಹೋಬಳಿ ಜಮಾಅತ್ ಒಕ್ಕೂಟ ವತಿಯಿಂದ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿಟ್ಲ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಹೆಚ್.ಈ. ನಾಗರಾಜ್ ರವರಿಗೆ ಮನವಿ ಮಾಡಲಾಯಿತು.

ಬಳಿಕ ಪರಿಯಾಲ್ತಡ್ಕ ಜುಮಾ ಮಸೀದಿ ಅಧ್ಯಕ್ಷ ಎಂ ಎಸ್ ಮಹಮ್ಮದ್ ಅವರು ಮಾತನಾಡಿ ಇತ್ತೀಚೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಮಾಧ್ಯಮದವರ ಜತೆ ಮಾತನಾಡುವ ವೇಳೆ ಮಸೀದಿಗಳಲ್ಲಿ ಶಸ್ತ್ರಾಸ್ತ್ರಗಳನ್ನು ಅಡಗಿಸಿ ಇಡಲಾಗಿದೆ. ಇಂತಹ ಮಸೀದಿಗಳಿಗೆ ದಾಳಿ ನಡೆಸಬೇಕು ಎಂದು ಹೇಳಿಕೆ ನೀಡಿದ್ದು, ಖಂಡನೀಯವಾಗಿದೆ ಎಂದರು.

ವಿಟ್ಲ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಅಶ್ರಪ್ ಮಹಮ್ಮದ್ ಪೊನ್ನೋಟ್ಟು ಅವರು ಮಾತನಾಡಿ ಮಸೀದಿಯೂ ಶಾಂತಿಯನ್ನು ಕಲಿಸುವ ಕೇಂದ್ರವಾಗಿದೆ. ಪೊಲೀಸ್ ಇಲಾಖೆ ಇಲ್ಲಿಗೆ ಬಂದು ಪರಿಶೀಲನೆ ನಡೆಸಬಹುದು. ಹರೀಶ್ ಪೂಂಜ ಹೇಳಿಕೆ ಶುದ್ಧ ಸುಳ್ಳಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಪರ್ತಿಪ್ಪಾಡಿ ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ಹಕೀಂ ಪಿ.ಎಂ, ಉಪಾಧ್ಯಕ್ಷರಾದ ಕೆ.ಎಂ ಲತೀಫ್ ಪರ್ತಿಪ್ಪಾಡಿ, ಕಡಂಬು ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ಖಾದರ್, ಕುಡ್ತಮುಗೇರು ಜುಮಾ ಮಸೀದಿ ಅಧ್ಯಕ್ಷ ಮಹಮ್ಮದ್, ಕಾರ್ಯದರ್ಶಿ ಹಸೈನಾರ್ ಮುಸ್ಲಿಯಾರ್, ಉಕ್ಕುಡ ಜುಮಾ ಮಸೀದಿ ಅಧ್ಯಕ್ಷ ಅಬ್ಬಾಸ್ ಟಿ.ಎಂ.ಎ, ಕಾನತ್ತಡ್ಕ ಜುಮಾ ಮಸೀದಿ ಅಧ್ಯಕ್ಷ ಹಮೀದ್ ಕಾನತ್ತಡ್ಕ, ವಿಟ್ಲ ಪಟ್ಟಣ ಪಂಚಾಯಿತಿ ಸದಸ್ಯರಾದ ವಿಕೆಎಂ ಅಶ್ರಫ್, ಹಸೈನಾರ್ ನೆಲ್ಲಿಗುಡ್ಡೆ, ಕೆಲಿಂಜ ಜುಮಾ ಮಸೀದಿಯ ಅಬ್ಬಾಸ್ ಕೆಲಿಂಜ, ಕನ್ಯಾನ ಗ್ರಾಮ ಪಂಚಾಯಿತಿ ಸದಸ್ಯ ಮಜೀದ್ ಕನ್ಯಾನ, ಹಸೈನಾರ್ ಸೆಟ್ಟಿಬೆಟ್ಟು ,ಹಮೀದ್ ಕುಕ್ಕಾಜೆ , ಶರಪುದ್ದೀನ್ ಕುಕ್ಕಾಜೆ, ಶಾಕೀರ್ ಅಳಕೆಮಜಲು, ಕಲಂದರ್ ಪರ್ತಿಪ್ಪಾಡಿ, ಕರೀಮ್ ಕುದ್ದುಪದವು, ವಿಕೆಎಂ ಹಂಝ, ಅಝೀಝ್ ಸನ, ಶಮೀರ್ ಪಳಿಕೆ ವಿ.ಎಸ್ ಇಬ್ರಾಹಿಂ,ಉಪಸ್ಥಿತರಿದ್ದರು.

Vishwa News 24

Recent Posts

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ – vishwanews24

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್‌ನ ಚಿರಾಗ್ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ…

14 minutes ago

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…

37 minutes ago

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

21 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

22 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

22 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

22 hours ago