Featured

ಬಂಟ್ವಾಳ: ಮಾಣಿಲ ಗ್ರಾ.ಪಂ. ಉಪಚುನಾವಣೆ : ಕಾಂಗ್ರೆಸ್‌ ಬೆಂಬಲಿತ ವಿಷ್ಣುಕುಮಾರ್‌ ಜಯ -Vishwanews24

ಬಂಟ್ವಾಳ: ಮಾಣಿಲ ಗ್ರಾ.ಪಂ. ಉಪಚುನಾವಣೆ : ಕಾಂಗ್ರೆಸ್‌ ಬೆಂಬಲಿತ ವಿಷ್ಣುಕುಮಾರ್‌ ಜಯ -Vishwanews24

ಬಂಟ್ವಾಳ, : ಸೋಮವಾರ ನಡೆದ ಮಾಣಿಲ ಗ್ರಾಪಂ ಉಪಚುನಾವಣೆಯ ಮತ ಎಣಿಕೆ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಬುಧವಾರ ನಡೆದಿದ್ದು, ಕಾಂಗ್ರೆಸ್‌ ಬೆಂಬಲಿತ ವಿಷ್ಣುಕುಮಾರ್ ಕೊಮ್ಮುಂಜೆ ಜಯಗಳಿಸಿದ್ದಾರೆ.

ಈ ಹಿಂದೆ ನಡೆದ ಚುನಾವಣೆಯಲ್ಲಿ ರಾಜೇಶ್ ಕುಮಾರ್ ಬಾಳೆಕಲ್ಲು ಅವರು ಎರಡು ಸ್ಥಾನಗಳಲ್ಲಿ ಸ್ಪರ್ಧಿಸಿದ್ದರು. ಎರಡು ಸ್ಥಾನಗಳಲ್ಲಿಯೂ ಗೆಲುವು ಸಾಧಿಸಿದ ಕಾರಣದಿಂದಾಗಿ ಒಂದು ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಜೇಶ್ ಕುಮಾರ್ ಬಾಳೆಕಲ್ಲು ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಸಲಾಗಿತ್ತು.

ಇದನ್ನೂ ಓದಿ :ದೇಶಕ್ಕೆ ಬಿಜೆಪಿ ಆಡಳಿತದಿಂದ ಆಗಿರುವ ನೋವಿಗೆ ಹೋಲಿಸಿದರೆ ನನ್ನ ನೋವು ಏನೂ ಅಲ್ಲ : ಮಮತಾ ಬ್ಯಾನರ್ಜಿ -Vishwanews24

ಮಾಣಿಲದ ಒಂದು ಸ್ಥಾನಕ್ಕೆ ಎಂಟು ನಾಮಪತ್ರಗಳು ಸಲ್ಲಿಕೆ ಆಗಿದ್ದು ಈ ಪೈಕಿ ಐದು ನಾಮಪತ್ರಗಳನ್ನು ಹಿಂಪಡೆಯಲಾಗಿತ್ತು. ಪಕ್ಷೇತರ ಅಭ್ಯರ್ಥಿ ಮೊಯ್ದೀನ್ ಕುಞ, ಕಾಂಗ್ರೆಸ್‌ ಬೆಂಬಲಿತ ವಿಷ್ಣುಕುಮಾರ್ ಕೊಮ್ಮುಂಜೆ, ರಾಜೇಶ್ ಕುಮಾರ್ ಬಾಳೆಕಲ್ಲು ಬೆಂಬಲಿತ ಸೂರಜ್ ರೈ ಕೆಳಗಿನಮನೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

1025 ಮಂದಿ ಮತದಾರರಿರುವ ಮಾಣಿಲದಲ್ಲಿ 637 ಮತ ಚಲಾವಣೆಯಾಗಿದೆ. ಕಾಂಗ್ರೆಸ್‌ ಬೆಂಬಲಿತ ವಿಷ್ಣುಕುಮಾರ್ 364 ಮತ ಗಳಿಸಿ ಜಯ ಸಾಧಿಸಿದ್ದು, ರಾಜೇಶ್ ಕುಮಾರ್ ಬಾಳೆಕಲ್ಲು ಬೆಂಬಲಿತ ಸೂರಜ್ ರೈ ಕೆಳಗಿನಮನೆ 226 ಮತ ಗಳಿಸಿ ಪರಾಭವಗೊಂಡಿದ್ದಾರೆ. ಪಕ್ಷೇತರ ಅಭ್ಯರ್ಥಿ ಮೊಯ್ದೀನ್ ಕುಞ 41 ಮತ ಗಳಿಸಿದ್ದು 6 ಮತಗಳು ತಿರಸ್ಕೃತಗೊಂಡಿವೆ.

ಇದನ್ನೂ ಓದಿ :ಇನ್ಮುಂದೆ ರೈಲಿನಲ್ಲಿ ಮೊಬೈಲ್‌ ಹಾಗೂ ಎಲೆಕ್ಟ್ರಾನಿಕ್‌‌ ಉಪಕರಣಗಳ ಚಾರ್ಜಿಂಗ್ ನಿರ್ಬಂಧ : ಭಾರತೀಯ ರೈಲ್ವೆ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

7 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

7 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

7 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

8 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

8 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

10 hours ago